ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೇಂದ್ರ ಗೃಹ ಸಚಿವ ಅಮಿತ್ ಶಾ (Smith shah) ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala sitaraman) ಮತ್ತು ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ ಸಿಂಧಿಯಾ (Jyothiradhit sindhia) ಅವರುಗಳ ಸ್ಪಷ್ಟ ನಿರ್ದೇಶನದೊಂದಿಗೆ, SAIL ಆಡಳಿತ ಮಂಡಳಿಯು ಭದ್ರಾವತಿ VISL ನಲ್ಲಿ ಉತ್ಪಾದನಾ ಚಟುವಟಿಕೆಗಳನ್ನು ಪುನರಾರಂಭಿಸಲು ಅಂತಿಮವಾಗಿ ಒಪ್ಪಿಕೊಂಡಿದೆ.
READ | ಬೆಲೆ ಏರಿಕೆ ಮುನ್ನ ದಿನ ಶಿವಮೊಗ್ಗದಲ್ಲಿ ಹಾಲಿನ ತಾತ್ಕಾಲಿಕ ಬಿಕ್ಕಟ್ಟು, ಕಾರಣವೇನು?
ಅದರನ್ವಯ ಬಾರ್ಮಿಲ್ (Barmill) ಕಾರ್ಯಾಚರಣೆಗಳು ಆಗಸ್ಟ್ 10 ರಿಂದ ಪ್ರಾರಂಭವಾಗಲಿದ್ದು, ಮುಂದಿನ ದಿನಗಳಲ್ಲಿ ಪ್ರಾಥಮಿಕ ಗಿರಣಿ ಪುನರಾರಂಭವಾಗಲಿದೆ.
ವಿಐಎಸ್ಎಲ್ ಅನ್ನು ನಂಬಿಕೊಂಡಿರುವ ಉದ್ಯೋಗಿ ಸಮುದಾಯಕ್ಕೆ ಮತ್ತು ಭದ್ರಾವತಿಯ ಜನ ಸಾಮಾನ್ಯರಿಗೆ ಈ ಒಂದು ನಿರ್ಧಾರ ಮಹತ್ವದ ಕ್ಷಣವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ (BY Raghavendra) ತಿಳಿಸಿದ್ದಾರೆ.
ಅವಿರತ ಶ್ರಮದ ಫಲ
ಕೇಂದ್ರ ಸರ್ಕಾರ ಸಂಬಂಧಿಸಿದ ಮಂತ್ರಿಗಳೊಂದಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಡೆಸಲಾದ ನಿರಂತರ ಪ್ರಯತ್ನದ ಫಲವಾಗಿ ಇಂತಹ ಒಂದು ಮಹತ್ತರವಾದ ನಿರ್ಣಯವನ್ನು SAIL ಕೈಗೊಳ್ಳಲು ಸಹಕಾರವಾಗಿದ್ದು, ಈ ಮಹತ್ವದ ಮೈಲಿಗಲ್ಲನ್ನು ಪಡೆಯಲು ದಣಿವರಿಯಿಲ್ಲದೆ ಕೆಲಸ ಮಾಡಿದ್ದೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.
VISLನ ಪುನರುಜ್ಜೀವನಕ್ಕೆ ಕೇಂದ್ರ ಸರ್ಕಾರ ನೀಡಿದಂತಹ ಭರವಸೆಗಳನ್ನು ಈಡೇರಿಸಿದ ಅವರ ಅಚಲ ಬದ್ಧತೆಗಾಗಿ ಕೇಂದ್ರ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
– ಬಿ.ವೈ.ರಾಘವೇಂದ್ರ, ಸಂಸದ
VISL ಶೀಘ್ರದಲ್ಲಿಯೇ ಉನ್ನತ ಯಶಸ್ಸು ಮತ್ತು ಸಮೃದ್ದಿಯ ಹಾದಿಯಲ್ಲಿ ಸಾಗಿ ತನ್ನ ಗತ ವೈಭವವನ್ನು ಮರಳಿ ಪಡೆಯುತ್ತದೆ ಎಂಬ ವಿಶ್ವಾಸವಿದೆ. ಇಂತಹ ಒಂದು ಮಹತ್ತರವಾದ ತೀರ್ಮಾನ ಬರುವಲ್ಲಿ ತಾಳ್ಮೆಯಿಂದ ಸಹಕರಿಸಿದ ವಿ.ಐ.ಎಸ್.ಎಲ್. ನ ಎಲ್ಲ ನೌಕರರ ಬಾಂಧವರಿಗೆ, ಕಾರ್ಮಿಕ ಸಂಘಟನೆ ಮುಖಂಡರಿಗೆ, ಜನಪ್ರತಿನಿಧಿಗಳಿಗೆ ರಾಘವೇಂದ್ರ ಧನ್ಯವಾದಗಳನ್ನು ತಿಳಿಸಿದ್ದಾರೆ.
Train | ಶಿವಮೊಗ್ಗದಿಂದ ಹೊರಡುವ ರೈಲು ರದ್ದು, ಜನ್ ಶತಾಬ್ದಿ ಅರ್ಧ ಗಂಟೆ ವಿಳಂಬ, ಕಾರಣವೇನು?