ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಅಜೇಯ ಸಂಸ್ಕೃತಿ ಬಳಗ ಹಾಗೂ ನಮೋ ಬ್ರಿಗೇಡ್ ಶಿವಮೊಗ್ಗದ ವತಿಯಿಂದ ಆ.28ರಿಂದ 30ರ ವರೆಗೆ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.
READ | ರೈಲ್ವೆ ಪ್ರಯಾಣಿಕರೇ ಗಮನಿಸಿ, ಮೈಸೂರು-ತಾಳಗುಪ್ಪ ರೈಲು ಸೇರಿ ರಾಜ್ಯದ ಈ ರೈಲುಗಳ ಪ್ರಾಯೋಗಿಕ ನಿಲುಗಡೆ ಇಂದಿನಿಂದ
ನಗರದ ಕೋಟೆ ರಸ್ತೆಯ ಕೋಟೆ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಆಚಾರ್ಯತ್ರಯರ ಭವನದಲ್ಲಿ ಪ್ರತಿದಿನ ಸಂಜೆ 6.30ಕ್ಕೆಉಪನ್ಯಾಸ ನಡೆಯಲಿದೆ.
“ಇನ್ನೂ ಮಲಗಿದರೆ, ಏಳುವಾಗ ಭಾರತವಿರುವುದಿಲ್ಲ!” ಎಂಬ ಶೀರ್ಷಿಕೆಯಡಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಂದ ಉಪನ್ಯಾಸ ಆಯೋಜಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಪಾಲ್ಗೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9019562277 ರಲ್ಲಿ ಸಂಪರ್ಕಿಸುವಂತೆ ತಿಳಿಸಲಾಗಿದೆ.