ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯದಲ್ಲಿ ಮಳೆ ಕೈಕೊಟ್ಟಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ, ಕೂಡಲೇ ರಾಜ್ಯದ 131 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸುವಂತೆ ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ (HR Basavarajapp) ಆಗ್ರಹಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಕೊರತೆಯಿಂದ ತೀವ್ರ ತೊಂದರೆಯಾಗಿದೆಮ ಈಗಾಗಲೇ ಹಲವೆಡೆ ಬರದ ಸ್ಥಿತಿ ಇದೆ. ಬೆಳೆ ಸಂಪೂರ್ಣ ನಾಶವಾಗಿದೆ. ಈಗ ಮಳೆ ಬಂದರೂ ಬೆಳೆ ಚೇತರಿಸಿಕೊಳ್ಳುವುದಿಲ್ಲ. ಕಂದಾಯ ಸಚಿವರೇ 120 ತಾಲೂಕುಗಳಲ್ಲಿ ಬರಗಾಲದ ಛಾಯೆ ಇದೆ ಎಂದು ಹೇಳಿದರು.
READ | ಶಿಕಾರಿಪುರ ಕೊಲೆ ಪ್ರಕರಣ, ಏಳು ಜನ ಆರೋಪಿಗಳ ಬಂಧನ, ಮರ್ಡರ್ ಹಿಂದಿನ ಕಾರಣವೇನು?
ಎಕರೆಗೆ ₹25 ಸಾವಿರ ಪರಿಹಾರ ನೀಡಿ
ಸರ್ಕಾರ 130 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸಿ ಪರಿಹಾರ ರೂಪವಾಗಿ ಎಕರೆಗೆ ₹25 ಸಾವಿರ ನೀಡಬೇಕು. ಫಸಲ್ ವಿಮಾ ಮಾಡಿಸಿದ ರೈತರಿಗೆ ಮಧ್ಯಂತರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಇದರ ಜೊತೆಗೆ ರೈತರ ಐಪಿ ಸೆಟ್ಗಳಿಗೆ ಹಗಲು ಹೊತ್ತು ಕನಿಷ್ಠ 10 ಗಂಟೆಗಳ ಸಮರ್ಪಕ ವಿದ್ಯುತ್ ನೀಡಬೇಕು. ಐಪಿ ಸೆಟ್ಗಳಿಗೆ ಆಧಾರ್ ಕಾರ್ಡ್ ಜೋಡಣೆಗೆ ಒತ್ತಾಯಿಸಬಾರದು. ಇದರ ಹಿಂದೆ ಖಾಸಗೀಕರಣದ ಹುನ್ನಾರ ಅಡಗಿದೆ. ಆಧಾರ್ ಕಾರ್ಡ್ ಜೋಡಣೆ ಮಾಡಿದರೆ ಮುಂದೆ ಮೊಬೈಲ್ಗಳಿಗೆ ಕರೆನ್ಸಿ ಹಾಕಿಸಿಕೊಂಡು ಉಪಯೋಗಿಸುವ ರೀತಿಯಲ್ಲಿ ಬಳಸಬೇಕಾಗುತ್ತದೆ ಎಂದು ದೂರಿದರು.
ಪದಾಧಿಕಾರಿಗಳಾದ ಎಸ್. ಶಿವಮೂರ್ತಿ, ಟಿ.ಎಂ. ಚಂದ್ರಪ್ಪ, ಹಿಟ್ಟೂರು ರಾಜು, ಕೆ. ರಾಘವೇಂದ್ರ, ಪಿ.ಡಿ.ಮಂಜಪ್ಪ ಇದ್ದರು.