ಸುದ್ದಿ ಕಣಜ.ಕಾಂ ಹೊಳೆಹೊನ್ನೂರು
HOLEHONNUR: ಹೊಳೆಹೊನ್ನೂರು ಪಟ್ಟಣದ ಗಾಂಧಿ ವೃತ್ತದಲ್ಲಿರುವ ಮಹಾತ್ಮ ಗಾಂಧೀಜಿ (Mahatma Gandhiji) ಪ್ರತಿಮೆಯನ್ನು ತಡರಾತ್ರಿ ದುಷ್ಕರ್ಮಿಗಳು ಧ್ವಂಸಗೊಳಿಸಿದ ಘಟನೆ ನಡೆದಿದೆ.
READ | ಡೆಂಘೆ ಪ್ರಕರಣ ಹೆಚ್ಚಳ, ಮನೆಯಲ್ಲಿ ಸೊಳ್ಳೆಗಳ ನಿಯಂತ್ರಣ ಹೇಗೆ? ಇಲ್ಲಿವೆ ಟಿಪ್ಸ್
ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಮೂರು ತಂಡ ರಚನೆ ಮಾಡಲಾಗಿದೆ.
– ಜಿ.ಕೆ.ಮಿಥುನ್ ಕುಮಾರ್, ಎಸ್.ಪಿ, ಶಿವಮೊಗ್ಗ
ಇದುವರೆಗಿನ ಬೆಳವಣಿಗೆಗಳು
- ಮಂಟಪದೊಳಗಿದ್ದ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
- ಪ್ರತಿಮೆ ಧ್ವಂಸ ವಿಚಾರ ಜನರಿಗೆ ಗೊತ್ತಾಗಿದ್ದೇ ಗುಂಪು ಸೇರಿ ಜನಸ್ತೋಮ. ಉದ್ವಿಗ್ನ ಸ್ಥಿತಿ ನಿರ್ಮಾಣ.
- ಕಿಡಿಗೇಡಿಗಳ ಪತ್ತೆಗೆ ಆಗ್ರಹಿಸಿ ಪ್ರತಿಭಟನೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದರು. ಸಿಸಿಟಿವಿ ದೃಶ್ಯ ಪರಿಶೀಲನೆ. ಪತ್ತೆಗೆ ಬಲೆ ಬೀಸಿದ ಪೊಲೀಸ್.
- ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದಿದ್ದಾರೆ.
Indian Audit dept | ಭಾರತೀಯ ಲೆಕ್ಕಪತ್ರ ಇಲಾಖೆಯಲ್ಲಿ 1773 ಹುದ್ದೆಗಳ ನೇಮಕ, ಅಧಿಸೂಚನೆಯಲ್ಲಿ ಏನಿದೆ?