ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯಲ್ಲಿ ನಡೆಯುವ ಸಣ್ಣಪುಟ್ಟ ಘಟನೆಗಳು, ಕರೆಯಲಾದ ಅರ್ಜಿ, ಜನರಿಗೆ ಅನುಕೂಲವಾಗುವ ವಿಚಾರಗಳು ಗಮನಕ್ಕೆ ಬರುವುದೇ ವಿರಳ. ಅದಕ್ಕಾಗಿ, ಈ ಒಂದು ಕ್ಲಿಕ್ ನಲ್ಲಿ ಹಲವು ಸುದ್ದಿಗಳನ್ನು ಓದಲು ‘ಸುದ್ದಿ ಕಣಜ’ ಅನುಕೂಲ ಮಾಡಿಕೊಡಲಿದೆ.
ನ್ಯೂಸ್ 1 | ಜಿಟಿಟಿಸಿಯಲ್ಲಿ ಡಿಪ್ಲೊಮಾ ತರಬೇತಿಗಾಗಿ ಅರ್ಜಿ
SHIMOGA: ಮಾಚೇನಹಳ್ಳಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(Government Tool Room & Training Centre)ದಲ್ಲಿ 2023-24ನೇ ಸಾಲಿನ ಖಾಲಿಯಿರುವ “ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್” ಕೋರ್ಸ್ಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಆಗಸ್ಟ್-14ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಟಿಟಿಸಿಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಘಟಕದ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರು, ಜಿಟಿಟಿಸಿ, ಶಿವಮೊಗ್ಗ , ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸಿಎ-38, ನಿಧಿಗೆ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ ಇವರನ್ನು ಖುದ್ದಾಗಿ ಅಥವಾ ದೂ.ಸಂ.: 9448307027/ 9880141054/ 9902232839/ 9449286543 ಗಳನ್ನು ಸಂಪರ್ಕಿಸುವುದು.
ನ್ಯೂಸ್ 2 | ಲೋಕಾಯುಕ್ತ ಕುಂದು-ಕೊರತೆ ಸಭೆ
BHADRAVATHI: ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೆÇಲೀಸ್ ಉಪಾಧೀಕ್ಷಕರು ಆ.8 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಭದ್ರಾವತಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದು, ಈ ಸಭೆಗೆ ಸಾರ್ವಜನಿಕರು ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವುದರಲ್ಲಿ ಸರ್ಕಾರಿ ಅಧಿಕಾರಿಗಳು ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸಲು ಕೋರಲಾಗಿದೆ.
ನ್ಯೂಸ್ 3 | ಮೀನುಗಾರಿಕೆ ಇಲಾಖೆಯ ಇ-ಸಂಗ್ರಹಣಾ ಪೋರ್ಟಲ್ನಲ್ಲಿ ನೊಂದಾಯಿಸಿ
SHIMOGA: ಮೀನುಗಾರಿಕೆ ಇಲಾಖೆಯ ಜಲಸಂಪನ್ಮೂಲಗಳ ಮೀನುಪಾಶುವಾರು ಹಕ್ಕನ್ನು ಮೀನುಗಾರರ ಸಹಕಾರ ಸಂಘಗಳಿಗೆ ನೇರಗುತ್ತಿಗೆ ಮೂಲಕ ವಿಲೇವಾರಿ ಮಾಡಿದ ನಂತರ, ಏತ ನೀರಾವರಿ ಯೋಜನೆಗೆ ಒಳಪಡುವ ಜಲಸಂಪನ್ಮೂಲಗಳು ಹಾಗೂ ಮೀನುಗಾರರಿಗೆ ಪರವಾನಗಿ ಮುಖಾಂತರ ಮೀನುಗಾರಿಕೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗುತ್ತಿರುವ ಜಲಸಂಪನ್ಮೂಲಗಳನ್ನು ಹೊರತುಪಡಿಸಿ, ಇಲಾಖಾ ವ್ಯಾಪ್ತಿಯ ಉಳಿದ ಜಲಸಂಪನ್ಮೂಲಗಳನ್ನು 2023-24ನೇ ಸಾಲಿನ ಮೀನುಗಾರಿಕೆ ಫಸಲಿ ವರ್ಷದಿಂದ ಇ-ಟೆಂಡರ್ ಪೋರ್ಟಲ್-2 ಮೂಲಕ ವಿಲೇವಾರಿ ಮಾಡಲಾಗುತ್ತಿದೆ. ಇಲಾಖಾ ಜಲಸಂಪನ್ಮೂಲಗಳ ಮೀನುಪಾಶುವಾರು ಹಕ್ಕನ್ನು ಪಡೆಯಲಿಚ್ಛಿಸುವವರು ಕರ್ನಾಟಕ ಸರ್ಕಾರ, ಇ-ಸಂಗ್ರಹಣಾ ಪೋರ್ಟಲ್ (E-Procurement Portal-2) ನಲ್ಲಿ ನೋಂದಾಯಿಸಿಕೊಳ್ಳುವುದು ಮತ್ತು ಅಗತ್ಯ DSC Key ಹೊಂದುವುದು ಕಡ್ಡಾಯವಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://eproc.karnataka.gov.in ಹಾಗೂ ಸಹಾಯವಾಣಿ ಕೇಂದ್ರ ಮೊ.ನಂ.: 8046010000/ 8068948777 ಗಳನ್ನು ಹಾಗೂ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸುವುದು.
ನ್ಯೂಸ್ 4 | ಪ್ರಶಸ್ತಿಗೆ ಅರ್ಜಿ ಆಹ್ವಾನ
SHIMOGA: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರೀಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಯಾರಿಗೆಲ್ಲ ಪ್ರಶಸ್ತಿ ಪ್ರದಾನ?
ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ ಕ್ರೀಡೆ ಮತ್ತು ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರೀಕರಿಗೆ 6 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 1 ಸಂಸ್ಥೆ ಸೇರಿ ಒಟ್ಟು 7 ಪ್ರಶಸ್ತಿಗಳನ್ನು ನೀಡಲಾಗುವುದು.
ಆಸಕ್ತರು ಅರ್ಜಿಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಶಿವಮೊಗ್ಗ ಈ ಕಚೇರಿಯಿಂದ ಪಡೆದು ಆಗಸ್ಟ್ 14 ರೊಳಗೆ ತ್ರಿಪ್ರತಿಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಬಿಎಸ್ಎನ್ಎಲ್ ಕಚೇರಿ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ www.dwdsc.karnataka.gov.in ಪರಿಶೀಲಿಸುವಂತೆ ಅಂಗವಿಕಲರ ಕಲ್ಯಾಣಾಧಿಕಾರಿ ಶಿಲ್ಪಾ ಎಂ.ದೊಡ್ಡಮನಿ ತಿಳಿಸಿದ್ದಾರೆ.