ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯ ತೀರ್ಥಹಳ್ಳಿ, ಭದ್ರಾವತಿ ಮತ್ತು ಶಿವಮೊಗ್ಗ ನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆ ಮಾಡಿದ್ದು, ಗಾಂಜಾ ಪ್ರಕರಣ ಸಂಬಂಧಿಸಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರ ಬಳಿಯಿಂದ ಗಾಂಜಾ ಸಹ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಎನ್.ಡಿ.ಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.
READ | ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಯಾವ ಕಾರ್ಯಕ್ರಮಗಳಲ್ಲಿ ಭಾಗಿ?
ಕೇಸ್ ನಂ. 1
THIRTHAHALLI: ತೀರ್ಥಹಳ್ಳಿಯ ಎಡೆಹಳ್ಳಿ ಕರೆ ಸರ್ಕಲ್ ಹತ್ತಿರ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ತೀರ್ಥಹಳ್ಳಿ ತಾಲೂಕು ಶಿವರಾಜಪುರ ನಿವಾಸಿ ಸಂಜಯ್ ಅಲಿಯಾಸ್ ಪೋತ(25) ಹಾಗೂ ಕುರುವಳ್ಳಿ ನಿವಾಸಿ ಪಿ.ಎಸ್. ಸುದೀಪ್ (21) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿಗಳ ಬಳಿ ಅಂದಾಜು ₹9 ಸಾವಿರ ಮೌಲ್ಯದ 190 ಗ್ರಾಂ. ತೂಕದ ಒಣ ಗಾಂಜಾ ಸೀಜ್ ಮಾಡಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಪಿಎಸ್.ಐ ಗಾದಿಲಿಂಗಪ್ಪ ನೇತೃತ್ವದಲ್ಲಿ ಸಿಬ್ಬಂದಿಯನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿದೆ.
ಕೇಸ್ ನಂ.2
BHADRAVATHI: ಹಳೆಬಾರಂದೂರು ಕಡೆಯಿಂದ, ಭದ್ರಾವತಿ ಕಡೆಗೆ ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪರಿಶೀಲಿಸಿದ್ದು,
ಭದ್ರಾವತಿಯ ವೀರಾಪುರ ನಿವಾಸಿ ಇಬ್ರಾಹಿಂ ಅಲಿಯಾಸ್ ಇಬ್ಬು ಮೀರಾ ಅಲಿಯಾಸ್ ಟಕ್ಕರ್ (21), ಕಡದಕಟ್ಟೆಯ ಸಂತೋಷ್ ಕುಮಾರ್(30) ಎಂಬುವವರನ್ನು ಬಂಧಿಸಲಾಗಿದೆ. ಅವರ ಬಳಿಯಿಂದ ಅಂದಾಜು ಮೌಲ್ಯ ₹10,000ದ ಒಟ್ಟು 161 ಗ್ರಾಂ ತೂಕದ ಒಣ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಪೇಪರ್ ಟೌನ್ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.
ಕೇಸ್ ನಂ.3
SHIMOGA: ನಗರದ ಸೂಳೆಬೈಲಿನ ಪುಟ್ಟಪ್ಪ ಕ್ಯಾಂಪ್ ಹತ್ತಿರ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರೆನ್ನಲಾದ ಹೊಳಲೂರಿನ ಹುಸೇನ್ ಅಲಿಯಾಸ್ ಸಾಂಬಾ(30) ಎಂಬುವವರನ್ನು ಬಂಧಿಸಲಾಗಿದೆ. ಅಂದಾಜು ಮೌಲ್ಯ ₹20,000ದ 338 ಗ್ರಾಂ ತೂಕದ ಒಣ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ.