ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಹಿಳೆಯರ ಆರ್ಥಿಕ ಸಬಲೀಕರಣ ಧ್ಯೇಯದೊಂದಿಗೆ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆ (gruha lakshmi scheme)ಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ (chief minister siddaramaiah) ಆ.27 ರಂದು ಬೆಳಗಾವಿಯಲ್ಲಿ ಚಾಲನೆ ನೀಡುತ್ತಿದ್ದು, ಏಕಕಾಲದಲ್ಲಿ ಎಲ್ಲ ಗ್ರಾ.ಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಜಿಲ್ಲಾಡಳಿತ ಕಚೇರಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ತಹಶೀಲ್ದಾರರರು, ಇಓಗಳು, ಸ್ಥಳೀಯ ಸಂಸ್ಥೆ ಮುಖ್ಯಸ್ಥರು, ಸಿಡಿಪಿಓಗಳೊಂದಿಗೆ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮ ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
READ | ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆ! ಮುಂದೇನಾಯ್ತು?
ಆ.27 ರ ಈ ಕಾರ್ಯಕ್ರಮದ ಕುರಿತು ಜಿ.ಪಂ ಯೋಜನಾ ನಿರ್ದೇಶಕರು ಗ್ರಾ.ಪಂ ವಾರು ಉಸ್ತುವಾರಿ ನೋಡಿಕೊಳ್ಳಬೇಕು. ಹೊಸನಗರ, ತೀರ್ಥಹಳ್ಳಿ, ಸಾಗರ ಗಳಲ್ಲಿ ಏನಾದರೂ ನೆಟವರ್ಕ್ ಸಮಸ್ಯೆಗಳಿದ್ದರೆ ಸರಿಪಡಿಸಿಕೊಂಡು ಈಗಿನಿಂದಲೇ ಸಿದ್ದತೆ ಆರಂಭಿಸಬೇಕು. ಎಲ್ಲ ತಾಲ್ಲೂಕುಗಳ ಸಿಡಿಪಿಓ ಗಳು ಕಾರ್ಯಕ್ರಮದ ತಯಾರಿ ಕುರಿತು ಮೇಲ್ವಿಚಾರಣೆ ನಡೆಸಿ ಈ ಬಗ್ಗೆ ವರದಿ ಸಲ್ಲಿಸಬೇಕು.
– ಸ್ನೇಹಲ್ ಸುಧಾಕರ ಲೋಖಂಡೆ, ಸಿಇಓ, ಜಿ.ಪಂ
ಮಾಡಿಕೊಳ್ಳಬೇಕಾದ ವ್ಯವಸ್ಥೆಗಳೇನು?
- ಆ.27 ರಂದು ಬೆಳಗಾವಿಯಿಂದ ಮುಖ್ಯಮಂತ್ರಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು, ಪ್ರತಿ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನ ಹಾಗೂ ನಗರ ಸ್ಥಳೀಯ ಸಂಸ್ಥೆ ವಾರ್ಡ್ ಗಳಲ್ಲಿ ಈ ಕಾರ್ಯಕ್ರಮವನ್ನು ಏಕಕಾಲದಲ್ಲಿ ಹಮ್ಮಿಕೊಳ್ಳಲಾಗುವುದು. ಬೆಳಗಾವಿ ಕಾರ್ಯಕ್ರಮದ ನೇರ ಪ್ರಸಾರವನ್ನು ಎಲ್ಲ ಗ್ರಾ.ಪಂ, ಸ್ಥಳೀಯ ಸಂಸ್ಥೆಗಳಲ್ಲಿ ಮಾಡಲಾಗುವುದು.
- ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ವಾರ್ಡುಗಳಲ್ಲಿ ಬೆಳಗಾವಿ ಕಾರ್ಯಕ್ರಮದ ನೇರ ಪ್ರಸಾರಕ್ಕೆ ಅಗತ್ಯವಾದ ಎಲ್ಇಡಿ ಪರದೆ ಅಥವಾ ಒಂದು ಟಿವಿ ವ್ಯವಸ್ಥೆ ಮಾಡಿಕೊಳ್ಳಬೇಕು.
- ಫಲಾನುಭವಿಗಳು ಮತ್ತು ಸಾರ್ವಜನಿಕರನ್ನು ಕಾರ್ಯಕ್ರಮಕ್ಕೆ ಸೇರಿಸಿ, ಸರ್ಕಾರಿ ಕಟ್ಟಡಗಳು ಅಥವಾ ಸಭಾ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕು. ಈ ಸಮಾರಂಭಕ್ಕೆ ಅಗತ್ಯವಾದ ಮೂಲಭೂತ ಸೌಕರ್ಯಗಳು ಸೇರಿಂದತೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು.
- ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ಗ್ರಾ.ಪಂ ಗಳಲ್ಲಿ, ಮಹಾನಗರ ಪಾಲಿಕೆ ಹಾಗೂ ನಗರಸಭೆಗಳಲ್ಲಿ ಪ್ರತಿ ವಾರ್ಡುಗಳು ಹಾಗೂ ಪುರಸಭೆಗಳಲ್ಲಿ ಫಲಾನುಭವಿಗಳ ಸಂಖ್ಯೆಗೆ ಅನುಗುಣವಾಗಿ 3 ರಿಂದ 4 ವಾರ್ಡುಗಳಲ್ಲಿ ಕಾರ್ಯಕ್ರಮ ಆಯೋಜನೆಗೆ ಕ್ರಮ ವಹಿಸಬೇಕು. ಮಳೆಗಾಲವಾದ್ದರಿಂದ ಈ ಅಂಶವನ್ನು ಗಮನದಲ್ಲಿರಿಸಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು.
ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾ.ಪಂಗಳಲ್ಲಿ ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ಈಗಲೇ ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕು. ನೋಡಲ್ ಅಧಿಕಾರಿಗಳು ಕಾರ್ಯಕ್ರಮದ ಸಿದ್ದತೆಗಳನ್ನು ಗಮನಿಸಿ ವರದಿ ಸಲ್ಲಿಸಬೇಕು.
ಸಭೆಯಲ್ಲಿ ತಹಶೀಲ್ದಾರ್ ನಾಗರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಸಂತೋಷಕುಮಾರ್, ಸಿಡಿಪಿಓ ಚಂದ್ರಪ್ಪ, ತಾಲ್ಲೂಕುಗಳ ತಹಶೀಲ್ದಾರರು, ಇಓ, ಸಿಡಿಪಿಓ, ಸ್ಥಳೀಯ ಸಂಸ್ಥೆ ಮುಖ್ಯಸ್ಥರು ಹಾಜರಿದ್ದರು.
Murder | ಸ್ವಾತಂತ್ರ್ಯ ದಿನಾಚರಣೆಯಂದೇ ಭದ್ರಾವತಿಯಲ್ಲಿ ತಡೆದು ನಿಲ್ಲಿಸಿ ಕೊಲೆ, ಮುಂದೇನಾಯ್ತು?