ಸುದ್ದಿ ಕಣಜ.ಕಾಂ ಸೊರಬ
SORAB: ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದಲ್ಲಿ (Chandragutti Renukamba Temple) ಕಳ್ಳತನ ಪ್ರಯತ್ನ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಚಂದ್ರಗುತ್ತಿ ಗ್ರಾಮ ಭೋವಿ ಕಾಲೋನಿಗಳಾದ ಪ್ರವೀಣ(33), ದೇವರಾಜು(50) ಮತ್ತು ಭೀಮಪ್ಪ(35) ಎಂಬುವವರನ್ನು ಬಂಧಿಸಲಾಗಿದೆ.
ಆ.8ರಂದು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು, ದೇವಸ್ಥಾನದ ಪ್ರಭಾರ ಕಾರ್ಯ ನಿರ್ವಣಾಧಿಕಾರಿ ಶಿವಪ್ರಸಾದ್ ಅವರು ನೀಡಿದ ದೂರಿನ ಮೇರೆಗೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
READ | ಸಂಸದರ ಜನ್ಮದಿನದಂದೇ ಎಫ್.ಎಂನಲ್ಲಿ ಸಂದರ್ಶನ, ಉಸ್ತುವಾರಿ ಸಚಿವರ ಆಗಮನ
ಪ್ರಕರಣ ಬೇಧಿಸಿದ ತಂಡ
ಪ್ರಕರಣದ ಆರೋಪಿತರ ಪತ್ತೆಗಾಗಿ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರಡ್ಡಿ ಮಾರ್ಗದರ್ಶನದಲ್ಲಿ ಶಿಕಾರಿಪುರ ಪೊಲೀಸ್ ಉಪಾಧೀಕ್ಷಕ ಶಿವಾನಂದ್ ಮದರಖಂಡಿ, ಸೊರಬ ಪೊಲೀಸ್ ವೃತ್ತ ನಿರೀಕ್ಷಕ ರಾಜಶೇಖರ್ ಮೇಲ್ವಿಚಾರಣೆಯಲ್ಲಿ ಸೊರಬ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕರಾದ ನಾಗರಾಜ್ ಮತ್ತು ಮಾಳಪ್ಪ ವೈ. ಚಿಪ್ಪಲಕಟ್ಟಿ ನೇತೃತ್ವದಲ್ಲಿ ಸಿಬ್ಬಂದಿ ರಾಘವೇಂದ್ರ, ವಿನಯ್, ಸಂದೀಪ್ ಅವರುಗಳನ್ನೊಳಗೊಂಡ ತಂಡ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
READ | ಫಾರ್ಚುನರ್ ಕಾರಿನಲ್ಲಿತ್ತು ಕಪ್ಪು ಬಣ್ಣದ ಕವರ್, ತೆಗೆದು ನೋಡಿದರೆ ಶಾಕ್!
ಕಳವು ಯತ್ನದ ಹಿಂದಿನ ಕಾರಣವೇನು?
ಬನವಾಸಿ ಬಸ್ ನಿಲ್ದಾಣದ ಬಳಿ ಆರೋಪಿಗಳನ್ನು ಸೋಮವಾರ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಆರೋಪಿ ದೇವರಾಜನು ದೇವಸ್ಥಾನದ ಕಮಿಟಿಗೆ ಸೇರಲು ಅರ್ಜಿಯನ್ನು ಸಲ್ಲಿಸಿದ್ದು, ಈತನ ಅರ್ಜಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ, ಹಾಲಿ ದೇವಸ್ಥಾನ ಕಮಿಟಿಯ ಅಧ್ಯಕ್ಷನೇ ಇದಕ್ಕೆ ಕಾರಣ ಎಂದು ಭಾವಿಸಿ ದ್ವೇಷದಿಂದ ಅವರ ಹೆಸರಿಗೆ ಕಳಂಕ ತಂದು ಅವರನ್ನು ಕಮಿಟಿಯಿಂದ ತೆಗೆಸುವ ಸಲುವಾಗಿ ದೇವಸ್ಥಾನ ಕಳ್ಳತನವಾಗಿರುವಂತೆ ಬಿಂಬಿಸಿ ದೇವಸ್ಥಾನದ ಪಾವಿತ್ರತೆಯನ್ನು ಹಾಗೂ ದೇವಸ್ಥಾನದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುವಂತೆ ಮಾಡಲು ಕಳ್ಳತನಕ್ಕೆ ಪ್ರಯತ್ನ ಮಾಡಿರುವುದು ವಿಚಾರಣೆಯಿಂದ ಕಂಡುಬಂದಿರುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.
Arrest | ಫಾರ್ಚುನರ್ ಕಾರಿನಲ್ಲಿತ್ತು ಕಪ್ಪು ಬಣ್ಣದ ಕವರ್, ತೆಗೆದು ನೋಡಿದರೆ ಶಾಕ್!