ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಹಣ ಕಳವು ಮಾಡಿರುವ ಆರೋಪದ ಹಿನ್ಬೆಲೆ ದಾಖಲಾದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ.
ಶಿರಾಳಕೊಪ್ಪದ ನೆಹರು ಕಾಲೋನಿ ನಿವಾಸಿ ಎ.ಎಸ್. ನಿತೀಶ್(32) ಎಂಬ ಆರೋಪಿಯನ್ನು ಬಂಧಿಸಿದ್ದು, ₹7,61,500 ನಗದು ಮತ್ತು ಒಂದು ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದಿದ್ದಾರೆ.
READ | ಆನಂದಪುರಂ- ಕುಂಸಿ ರೈಲ್ವೆ ನಿಲ್ದಾಣಗಳ ಮಧ್ಯೆ ವ್ಯಕ್ತಿ ಸಾವು, ಎಡಗೈಯಲ್ಲಿ ಹದ್ದಿನ ಚಿತ್ರ
ನಡೆದಿದ್ದೇನು?
ಶಿವಮೊಗ್ಗ 24X7 ಕುಡಿಯುವ ನೀರು ಸರಬರಾಜಿನ ಪ್ರಾಜೆಕ್ಟ್ ಮ್ಯಾನೇಜರ್ ಹೇಮಂತ್ ಕುಮಾರ್ ಅವರ ಕಾರು ಚಾಲಕ ನಿತೀಶ್ ಎಂಬಾತ ಕಳೆದ ತಿಂಗಳು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯೋತಿ ನಗರದ ಬಳಿ ಹೇಮಂತ್ ಕುಮಾರ್ ಅವರ ಹತ್ತಿರವಿದ್ದ ಹಣ ಇಟ್ಟಿದ್ದ ಬ್ಯಾಗ್ ಅನ್ನು ಕಿತ್ತುಕೊಂಡು ಹೋಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಸುಲಿಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
ಪ್ರಕರಣ ಬೇಧಿಸಿದ ತಂಡ
ಆರೋಪಿ ಪತ್ತೆಗೆ ಎಸ್.ಪಿ ಜಿ.ಕೆ.ಮಿಥುನ್ ಕುಮಾರ್ (G.K. Mithun Kumar), ಹೆಚ್ಚುವರಿ ಎಸ್.ಪಿ ಅನಿಲ್ ಕುಮಾರ್ ಭೂಮರಡ್ಡಿ (Anil Kumar bhumaraddy) ಮಾರ್ಗದರ್ಶನದಲ್ಲಿ ಶಿವಮೊಗ್ಗ ಎ ಉಪ ವಿಭಾಗ ಪೊಲೀಸ್ ಉಪಾಧೀಕ್ಷಕ ಬಿ.ಬಾಲರಾಜ್ ಮೇಲ್ವಿಚಾರಣೆಯಲ್ಲಿ ತುಂಗಾನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ್ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕ ಕುಮಾರ್ ಕುರಗುಂದ, ರಘುವೀರ, ಎ.ಎಸ್.ಐ ಮನೋಹರ್, ಸಿಬ್ಬಂದಿ ಕಿರಣ್ ಮೋರೆ, ಅರುಣ್ ಕುಮಾರ, ಮೋಹನ್ ಕುಮಾರ್, ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ಲಂಕೇಶ್ ಕುಮಾರ್, ಕಾಂತರಾಜ್, ಅರಿಹಂತ ಶಿರಹಟ್ಟಿ, ಹರೀಶ್ ತಂಡವು ಕಾರ್ಯಾಚರಣೆ ನಡೆಸಿದೆ.
Linganamakki dam | ಮಳೆ ಕುಸಿದರೂ ಲಿಂಗನಮಕ್ಕಿಯಲ್ಲಿ ನೀರಿನ ಮಟ್ಡ ಏರಿಕೆ, ಯಾವ ಜಲಾಶಯಗಳಲ್ಲಿ ಎಷ್ಟಿದೆ ನೀರು?