ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ – 5 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಆ.18 ರ ಬೆಳಗ್ಗೆ 10 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ಗೋಪಾಳ ಬಡಾವಣೆ, ಬಿ.ಸಿ.ಡಿ. ಇ.ಎಫ್ ಬ್ಲಾಕ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ (MESCOM) ತಿಳಿಸಿದೆ.
READ | ಶಾನ್ವಿ ಶ್ರೀವಾತ್ಸವ್ ನಟನೆಯ ಬ್ಯಾಂಗ್ ಚಿತ್ರ ಬಿಡುಗಡೆ ನಾಳೆ, ಎಲ್ಲೆಲ್ಲಿ ಶೂಟಿಂಗ್?
ಶೈಕ್ಷಣಿಕ ಶುಲ್ಕ ಮರುಪಾವತಿ
SHIMOGA: ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಕ್ರೀಡಾಪಟುಗಳು 2022-23 ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ನಮೂನ ಹಾಗೂ ಮಾರ್ಗಸೂಚಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಈ ಕಚೇರಿಯಲ್ಲಿ ಪಡೆದು ದಿ: 25-09-2023 ರೊಳಗಾಗಿ ಸಲ್ಲಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ದರಪಟ್ಟಿ ಪರಿಷ್ಕರಣೆ
SHIMOGA: ಸರ್ಕಾರದ ಸೂಚನೆಯನ್ವಯ ಜಿಲ್ಲೆಯ ಶಿಕಾರಿಪುರ (shikaripura) ಹಾಗೂ ತೀರ್ಥಹಳ್ಳಿ (thirthahalli) ತಾಲ್ಲೂಕುಗಳ ಸ್ಥಿರಾಸ್ತಿಗಳ ಮಾರುಕಟ್ಟೆ ದರಪಟ್ಟಿಯನ್ನು 2023-24ನೇ ಸಾಲಿಗೆ ಪರಿಷ್ಕರಿಸಲು ಆ.11ರಂದು ಮೌಲ್ಯಮಾಪನ ಉಪ ಸಮಿತಿ ಸಭೆಯಲ್ಲಿ ತೀರ್ಮಾನಿಸಿ, ಸಭಾ ನಡವಳಿಯಂತೆ ತಾತ್ಕಾಲಿಕ ಪರಿಷ್ಕೃತ ಮಾರ್ಗಸೂಚಿ ದರಪಟ್ಟಿಯನ್ನು ಉಪನೋಂದಣಾದಿಕಾರಿಗಳ ಕಚೇರಿ, ಶಿಕಾರಿಪುರ ಹಾಗೂ ತೀರ್ಥಹಳ್ಳಿ ತಾಲ್ಲೂಕು ಇಲ್ಲಿ ಆ.14 ರಂದು ಪ್ರಕಟಿಸಲಾಗಿರುತ್ತದೆ.
ಈ ಪರಿಷ್ಕೃತ ಮಾರ್ಗಸೂಚಿ ದರಪಟ್ಟಿಯಲ್ಲಿ ಬಿಟ್ಟು ಹೋಗಿರುವ ಪ್ರದೇಶ, ರಸ್ತೆ ಹಾಗೂ ಬಡಾವಣೆಗಳ ಬಗ್ಗೆ ಮಾಹಿತಿಯನ್ನು ಹಾಗೂ ಸದರಿ ಪರಿಷ್ಕೃತ ಮಾರ್ಗಸೂಚಿ ದರಪಟ್ಟಿಯ ಕುರಿತು ಅಹವಾಲುಗಳನ್ನು ಸಲ್ಲಿಸಲು
ಆ.28ರ ವರೆಗೆ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರು ಈ ಬಗ್ಗೆ ತಮ್ಮ ಅಹಲವಾಲುಗಳನ್ನು ಲಿಖಿತವಾಗಿ ಕಚೇರಿಯ ಅವಧಿಯಲ್ಲಿ ಉಪನೋಂದಣಾಧಿಕಾರಿಗಳು, ಶಿಕಾರಿಪುರ ಇವರಿಗೆ ಸಲ್ಲಿಸಬಹುದು ಎಂದು ಶಿಕಾರಿಪುರ ಮತ್ತು ತೀರ್ಥಹಳ್ಳಿ ಉಪ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
READ | ಆಗಸ್ಟ್ ತಿಂಗಳುಪೂರ್ತಿ ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ
ಅರಸುರವರ ಜನ್ಮ ದಿನ
SHIMOGA: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರ 108ನೇ ಜನ್ಮ ದಿನಾಚರಣೆಯನ್ನು
ಆ.20 ರಂದು ಬೆಳಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಶಾಲಾ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪನವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ತಂಗಡಗಿ ಶಿವರಾಜ್ ಸಂಗಪ್ಪನವರು, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷ ಡಿ.ಸುಧಾಕರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ(ಚೆನ್ನಿ) ಅಧ್ಯಕ್ಷತೆ ವಹಿಸುವರು.
ಅಂದು ಬೆಳಗ್ಗೆ 9.30 ಕ್ಕೆ ನಗರದ ಸೈನ್ಸ್ ಮೈದಾನದಿಂದ ಡಿ.ದೇವರಾಜ ಅರಸು ಭಾವಚಿತ್ರದ ಮೆರವಣಿಗೆಯನ್ನು ವಿವಿಧ ಜನಪದ ತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಏರ್ಪಡಿಸಲಾಗುವುದು.
Inspector | ಶಿವಮೊಗ್ಗದಲ್ಲಿ 8 ವರ್ಷದ ಹುಡುಗ ಒಂದು ದಿನದ ಇನ್’ಸ್ಪೆಕ್ಟರ್!