ಸುದ್ದಿ ಕಣಜ.ಕಾಂ ಭದ್ರಾವತಿ
BHADRAVATHI: ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ಅಧ್ಯಕ್ಷತೆಯಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 328 ಅಹವಾಲುಗಳನ್ನು ಜನರಿಂದ ಸ್ವೀಕರಿಸಲಾಗಿದೆ.
ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಅತ್ಯಧಿಕ 126 ಅಹವಾಲು ಸ್ವೀಕರಿಸಲಾಗಿದೆ. ನಂತರ ಸ್ಥಾನದಲ್ಲಿ ಜಿಲ್ಲಾ ಪಂಚಾಯತ್ಗೆ ಸಂಬಂಧಿಸಿದಂತೆ 38 ಅರ್ಜಿಗಳು ಬಂದಿವೆ.
READ | ಹಿಂದೂ ಮಹಾಸಭಾ ಗಣೇಶ, ಸಿದ್ಧವಾಯ್ತು ಮುಖ್ಯ ದ್ವಾರ, ಏನೇನು ವಿಶೇಷ?, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
ಇಲಾಖೆವಾರು ಅರ್ಜಿ ಸಲ್ಲಿಕೆ ವಿವರ
ಕಾರ್ಮಿಕ ಇಲಾಖೆಗೆ 2, ಸ್ಮಾರ್ಟ್ಸಿಟಿಗೆ 2, ಅಬಕಾರಿ ಇಲಾಖೆಗೆ 3, ಸಮಾಜ ಕಲ್ಯಾಣ ಇಲಾಖೆಗೆ 03, ಪಶುಪಾಲನಾ ಇಲಾಖೆಗೆ 3, ಕೆಎಸ್ಆರ್ಟಿಸಿಗೆ 8, ಆಹಾರ ಇಲಾಖೆಗೆ 8, ಮೆಸ್ಕಾಂ ಗೆ 10, ಪೊಲೀಸ್ ಇಲಾಖೆಗೆ 11, ಆರೋಗ್ಯ ಇಲಾಖೆಗೆ 14, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ಸಂಬಂಧಿಸಿದ 19, ಮಹಾನಗರಪಾಲಿಕೆಗೆ 26, ಪ್ರೌಢಶಿಕ್ಷಣ ಇಲಾಖೆಗೆ 26, ಇತರೆ ಇಲಾಖೆಗಳಿಗೆ ಸಂಬಂಧಿಸಿದ 29 ಸೇರಿದಂತೆ ಒಟ್ಟು 328 ಅಹವಾಲು ಸ್ವೀಕರಿಸಲಾಗಿದ್ದು, ವಿಲೇವಾರಿ ಕಾರ್ಯ ಪ್ರಗತಿಯಲ್ಲಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ತಿಳಿಸಿದ್ದಾರೆ.