ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಕುವೆಂಪು ರಂಗಮಂದಿರ(Kuvempu rangamandir)ದಲ್ಲಿ ದೇವರಾಜ ಅರಸು (Devaraj arasu) ಪ್ರಶಸ್ತಿ ಪುರಸ್ಕೃತ, ಹೋರಾಟಗಾರ ಕಾಗೋಡು ತಿಮ್ಮಪ್ಪನವರ ಅಭಿನಂದನಾ ಸಮರ್ಪಣಾ ಸಮಾರಂಭ ಸೆ.16ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.
ಕಾಗೋಡು ತಿಮ್ಮಪ್ಪ (kagodu timmappa) ಅಭಿನಂದನಾ ಸಮಿತಿಯ ಗೌರವಾಧ್ಯಕ್ಷ, ಮಾಜಿ ಶಾಸಕ ಜಿ.ಡಿ ನಾರಾಯಣಪ್ಪ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಕಾಗೋಡು ತಿಮ್ಮಪ್ಪ ಈ ನಾಡು ಕಂಡ ಅಪರೂಪದ ವ್ಯಕ್ತಿ. ಶೋಷಿತರ ಪರವಾಗಿ ಹೋರಾಡಿದವರು. ಗೇಣಿದಾರರ ಪರವಾಗಿ ಬಗರ್ ಹುಕುಂ ರೈತರ ಪರವಾಗಿ, ಮುಳುಗಡೆ ಸಂತ್ರಸ್ತರ ಪರವಾಗಿ ಹೋರಾಟ ಮಾಡಿದ ಅವರು ಒಂದು ಸಾಮಾಜಿಕ ಕ್ರಾಂತಿಯನ್ನೇ ಮಾಡಿದವರು. ಅವರಿಗೆ ದೇವರಾಜ ಅರಸು ಪ್ರಶಸ್ತಿ ಸಹ ಬಂದಿದೆ ಎಂದು ತಿಳಿಸಿದರು.
READ | ಶಿವಮೊಗ್ಗದಲ್ಲಿ ನಡೆಯಲಿದ್ದ ಉದ್ಯೋಗ ಮೇಳ ಮುಂದೂಡಿಕೆ, ಕಾರಣವೇನು?
ಇಂತಹ ಮಹಾನ್ ವ್ಯಕ್ತಿಗೆ ಅಭಿನಂದನೆ ಸಮರ್ಪಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವೂ ಆಗಿದೆ. ಅಲ್ಲದೆ ಕಾಗೋಡು ತಿಮ್ಮಪ್ಪನವರನ್ನು ಎಲ್ಲ ಪಕ್ಷದ ಮುಖಂಡರು ಎಲ್ಲಾ ಜಾತಿಯ ಬಾಂಧವರು ಅತ್ಯಂತ ಪ್ರೀತಿಯಿಂದ ಮೆಚ್ಚಿಕೊಳ್ಳುತ್ತಾರೆ. ಈ ಹಿನ್ನೆಲೆಯಲ್ಲಿ ಅವರ ಅಭಿನಂದನಾ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುವುದು ಎಂದರು.
ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ. ಬಿ.ಎಲ್. ಶಂಕರ್ ಅಭಿನಂದನಾ ಭಾಷಣ ಮಾಡುವರು. ಮಾಜಿ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಮುಖ್ಯ ಭಾಷಣ ಮಾಡುವರು. ಸಮಾರಂಭದಲ್ಲಿ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಅಭಿನಂದನಾ ಸಮಿತಿ ಗೌರವಾಧ್ಯಕ್ಷ ಡಾ. ಜಿ.ಡಿ. ನಾರಾಯಣಪ್ಪ, ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಗಣ್ಯರು ಭಾಗವಹಿಸುವರು ಎಂದು ಹೇಳಿದರು.
ಸಮಿತಿಯ ಉಪಾಧ್ಯಕ್ಷರಾದ ವಿ.ರಾಜು, ತೀ.ನ. ಶ್ರೀನಿವಾಸ್, ಪ್ರಮುಖರಾದ ಪಿ. ಪುಟ್ಟಯ್ಯ, ಪ್ರೊ. ಎಚ್. ರಾಚಪ್ಪ, ಪಿ.ಆರ್. ಗಿರಿಯಪ್ಪ, ಆರ್.ಟಿ. ನಾಗರಾಜ್, ಎಸ್.ಬಿ. ಅಶೋಕ್ ಕುಮಾರ್ ಉಪಸ್ಥಿತರಿದ್ದರು.