ಸುದ್ದಿ ಕಣಜ.ಕಾಂ ಸೊರಬ
SORAB: ಸೊರಬ ತಾಲೂಕಿನ ಕುಂಸಿ ಗ್ರಾಮದಲ್ಲಿ ರೈತನೊಬ್ಬ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ.
ಮಲ್ಲಿಕಾರ್ಜುನ್ (32) ಎಂಬುವವರು ಮೃತಪಟ್ಟಿದ್ದಾರೆ. ಕೆರೆಯಲ್ಲಿ ಎತ್ತುಗಳಿಗೆ ನೀರು ಕುಡಿಸುವುದಕ್ಕಾಗಿ ಕರೆದುಕೊಂಡು ಹೋಗಿದ್ದು, ಕಾಲು ಜಾರಿ ಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಶವವನ್ನು ಕೆರೆಯಿಂದ ಮೇಲೆತ್ತಿದ್ದಾರೆ.
READ | ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿವೆ ತಿಳಿಯಲೇಬೇಕಾದ 8 ಅಂಶಗಳು