ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಇಂದು (ಸೆ.28) ನಡೆಯುವ ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆಯ ಹಿನ್ನೆಲೆಯಲ್ಲಿ ದಾವಣಗೆರೆ ಪೂರ್ವ ವಲಯ ಡಿಐಜಿಪಿ ತ್ಯಾಗರಾಜನ್ ಅವರು ಪೊಲೀಸ್ ಅಧಿಕಾರಿಗಳ ವಿಶೇಷ ಸಭೆ ನಡೆಸಿದರು.
READ | ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಗೆ ಹೈಸೆಕ್ಯೂರಿಟಿ, ಡ್ರೋಣ್, ಕ್ಯಾಮರಾಗಳ ಕಣ್ಗಾವಲಲ್ಲಿ ಇಡೀ ಸಿಟಿ
ನಗರದ ಡಿಎಆರ್ ಮೈದಾನದಲ್ಲಿ ಬಂದೋಬಸ್ತ್ ಗೆ ನಿಯೋಜಿಸಲಾದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ವಿವರಿಸಿದರು. ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಎಸ್.ಪಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ಎಸ್.ಪಿ. ಅನಿಲ್ ಕುಮಾರ್ ಭೂಮರಡ್ಡಿ, ಕಲಬುರಗಿ ಹೆಚ್ಚುವರಿ ಎಸ್.ಪಿ. ಎನ್.ಶ್ರೀನಿಧಿ, ಮಂಡ್ಯ ಹೆಚ್ಚುವರಿ ಎಸ್.ಪಿ. ಸಿ.ಇ.ತಿಮ್ಮಯ್ಯ ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ನಗರದಲ್ಲಿ ಗಮನ ಸೆಳೆದ ರೂಟ್ ಮಾರ್ಚ್
ಎಸ್.ಪಿ. ಮಿಥುನ್ ಕುಮಾರ್ ನೇತೃತ್ವದಲ್ಲಿ ನಗರದಲ್ಲಿ ರೂಟ್ ಮಾರ್ಚ್ (ಪಥ ಸಂಚಲನ) ನಡೆಯಿತು. ಗೋಪಿ ವೃತ್ತದಿಂದ ಪ್ರಾರಂಭಿಸಿ ಅಮೀರ್ ಅಹಮ್ಮದ್ ವೃತ್ತ, ಶಿವಪ್ಪ ನಾಯಕ ವೃತ್ತ, ಗಾಂಧಿ ಬಜಾರ್ ರಸ್ತೆ, ಎಂಕೆಕೆ ರಸ್ತೆ, ಕೆ ಆರ್ ಪುರಂನಿಂದ ಆರ್.ಎಂ.ಎಲ್ ನಗರದ ಟೆಂಪೋ ಸ್ಟಾಂಡ್ ಗೆ ಬಂದು ಮುಕ್ತಾಯ ಮಾಡಲಾಯಿತು.
ಪೊಲೀಸ್ ಉಪಾಧೀಕ್ಷಕರುಗಳು, ಪೊಲೀಸ್ ವೃತ್ತ ನಿರೀಕ್ಷಕರುಗಳು, ಪೊಲೀಸ್ ನಿರೀಕ್ಷಕರುಗಳು, ಪೊಲೀಸ್ ಉಪ ನಿರೀಕ್ಷಕರುಗಳು ಹಾಗೂ ಆರ್.ಎ.ಎಫ್, ಡಿಎಆರ್, ಕೆಎಸ್ಆರ್.ಪಿ, ಸಿವಿಲ್ ಪೊಲೀಸ್ ಅಧಿಕಾರಿ ಸಿಬ್ಬಂದಿ ಹಾಗೂ ಗೃಹ ರಕ್ಷಕ ಸಿಬ್ಬಂದಿ ಭಾಗವಸಿದ್ದರು.