Janatha darshana | ಸೆ.25ರಂದು ಜನತಾದರ್ಶನ, ಅಹವಾಲಿಗೆ ಟೋಕನ್ ವ್ಯವಸ್ಥೆ, ಏನೆಲ್ಲ ನಿಯಮ ಅನ್ವಯ?

DC Office

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIIVAMOGGA: ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ನೇತೃತ್ವದಲ್ಲಿ ಸೆ.25ರ ಬೆಳಗ್ಗೆ 10.30ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಜನತಾದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾಕಾರಿ ಡಾ. ಆರ್.ಸೆಲ್ವಮಣಿ ತಿಳಿಸಿದ್ದಾರೆ.

Madhu Bangarappa
ಮಧು ಬಂಗಾರಪ್ಪ

READ | ಗಣಪತಿ ಮೆರವಣಿಗೆ ವೇಳೆ‌ ಗುಂಪುಗಳ ನಡುವೆ ಮಾತಿನ ಚಕಮಕಿ, ಮುಂದೇನಾಯ್ತು?

ಸ್ಥಳೀಯವಾಗೇ ಪರಿಹಾರ
ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ರಾಜಧಾನಿ ಬೆಂಗಳೂರಿಗೆ ಹೋಗಿ ಹಲವಾರು ರೀತಿಯ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲು ಸಲ್ಲಿಸುತ್ತಿರುವುದನ್ನು ನಿಯಂತ್ರಿಸಿ, ಸ್ಥಳೀಯ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ರಾಜ್ಯದಾದ್ಯಂತ ಏಕಕಾಲದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಕಾರ್ಯಕ್ರಮ ನಡೆಯುವ ದಿನದಂದು ಬೆಳಗ್ಗೆ 9.30ರಿಂದ ನಿಗಪಡಿಸಿದ ಸ್ಥಳದಲ್ಲಿ ಖುದ್ದು ಹಾಜರಿದ್ದು ಸಾರ್ವಜನಿಕರು ಅವಹಾಲುಗಳನ್ನು ಸಲ್ಲಿಸಬಹುದಾಗಿದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದಾಗಿದೆ.
ಸಾರ್ವಜನಿಕ ಅಹವಾಲಿಗೆ ಟೋಕನ್ ವ್ಯವಸ್ಥೆ
ಸಾರ್ವಜನಿಕವಾಗಿ ಅಹವಾಲು ಸಲ್ಲಿಸುವವರು ಗರಿಷ್ಠ ಇಬ್ಬರಿಗೆ ಅವಕಾಶ ನೀಡಲಾಗುವುದು. ಅರ್ಜಿ ನೋಂದಾಯಿಸಿದ ನಂತರ ಟೋಕನ್ ಪಡೆದುಕೊಳ್ಳಬೇಕು. ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಕೆಯಾದ ನಂತರ ಉಳಿಕೆಯವರಿಗೆ ಅವಕಾಶ ಕಲ್ಪಿಸಿಕೊಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

error: Content is protected !!