ಸುದ್ದಿ ಕಣಜ.ಕಾಂ ಭದ್ರಾವತಿ
BHADRAVATHI: ಉತ್ತರ ಪ್ರದೇಶ (Uttara pradesh) ಮೂಲದ ಮಾಚೇನಹಳ್ಳಿ ನಿವಾಸಿ ರವೀಂದ್ರ ಯಾದವ್(39) ಎಂಬಾತನಿಗೆ ಬೈಕಿನಲ್ಲಿ ಡ್ರಾಪ್ ಮಾಡುವುದಾಗಿ ಹೇಳಿ ದರೋಡೆ ಮಾಡಿದ ಪ್ರಕರಣವನ್ನು ಪೊಲೀಸರು 24 ಗಂಟೆಯಲ್ಲೇ ಬೇಧಿಸಿದ್ದಾರೆ.
READ | ಫ್ರೀಡಂ ಪಾರ್ಕಿನಲ್ಲಿ ಕೈಕೊಯ್ದುಕೊಂಡ ಬಾಲಕಿ ಪ್ರಾಣ ರಕ್ಷಿಸಿದ ಪೊಲೀಸ್, ಏನಿದು ಪ್ರಕರಣ?
ಮಾಚೇನಹಳ್ಳಿಗೆ (Machenahalli) ಹೋಗಲು ಭದ್ರಾವತಿಯ ಬಸ್ ನಿಲ್ದಾಣದ (Bhadravathi Bus stand) ಬಳಿ ಬಸ್ ಗೆ ಕಾಯುತ್ತಾ ನಿಂತಿದ್ದಾಗ ಯಾರೋ ಇಬ್ಬರು ಅಪರಿಚಿತ ವ್ಯಕ್ತಿಗಳು ಬೈಕ್ ನಲ್ಲಿ ಬಂದು ಡ್ರಾಪ್ ಕೊಡುತ್ತೇವೆಂದು ಹೇಳಿ ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಜೇಡಿಕಟ್ಟೆ ಹತ್ತಿರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಗದು, ಎಟಿಎಂ ಕಾರ್ಡ್ ಮತ್ತು ಮೊಬೈಲ್ ಫೋನ್ ಅನ್ನು ಸುಲಿಗೆ ಮಾಡಿಕೊಂಡು ಹೋಗಿರುತ್ತಾರೆ. ಈ ಸಂಬಂಧ ನೀಡಿದ ದೂರಿನ ಮೇರೆಗೆ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಕ್ರಿಯವಾದ ಪೊಲೀಸರ ತಂಡ
ಪ್ರಕರಣದಲ್ಲಿ ಆರೋಪಿತರ ಪತ್ತೆಗಾಗಿ ಎಸ್.ಪಿ. ಜಿ.ಕೆ.ಮಿಥುನ್ ಕುಮಾರ್ (shimoga SP G.K. Mithun Kumar), ಹೆಚ್ಚುವರಿ ಎಸ್.ಪಿ ಅನಿಲ್ ಕುಮಾರ್ ಭೂಮರಡ್ಡಿ ಮಾರ್ಗದರ್ಶನದಲ್ಲಿ ಭದ್ರಾವತಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಕೆ.ಆರ್.ನಾಗರಾಜ್, ಭದ್ರಾವತಿ ನಗರ ವೃತ್ತ ಸಿಪಿಐ ಜೆ.ಶ್ರೀಶೈಲದ ಕುಮಾರ್ ಮೇಲ್ವಿಚಾರಣೆಯಲ್ಲಿ ಪಿಎಸ್ಐಗಳಾದ ಟಿ.ರಮೇಶ್, ಭಾರತಿ, ಸಿಬ್ಬಂದಿ ಟಿ.ನವೀನ್, ಪ್ರವೀಣ್ ಕುಮಾರ್ ಅವರುಗಳನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿದೆ.
READ | ಸಿ- ವೃಂದದ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ, ಕಲ್ಯಾಣ ಕರ್ನಾಟಕದವರಿಗೆ ವಿಶೇಷ ಸೂಚನೆ
ಇಬ್ಬರು ಆರೋಪಿಗಳ ಬಂಧನ
ಭದ್ರಾವತಿಯ ಸುಲ್ತಾನ್ ಮಟ್ಟಿ ಗ್ರಾಮ ನಿವಾಸಿಗಳಾದ ಎಸ್.ಚೇತನ್ (21), ಕೆ.ಕೀರ್ತನ್(21) ಎಂಬುವವರನ್ನು ಬಂಧಿಸಲಾಗಿದೆ. ಆರೋಪಿತರಿಂದ ₹11,300, ಅಂದಾಜು ₹50,000 ಮೌಲ್ಯದ 2 ಮೊಬೈಲ್ ಫೋನ್ ಗಳು ಮತ್ತು ಕೃತ್ಯಕ್ಕೆ ಬಳಸಿದ ಅಂದಾಜು ₹20,000 ಮೌಲ್ಯದ 1 ದ್ವಿಚಕ್ರ ವಾಹನ ಸೇರಿ ಒಟ್ಟು ₹81,300 ನಗದು ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣ ದಾಖಲಾಗಿ 24 ಗಂಟೆಯ ಒಳಗೆ ಆರೋಪಿಗಳನ್ನು ಪತ್ತೆಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ತನಿಖಾ ತಂಡದ ಉತ್ತಮ ಕಾರ್ಯವನ್ನು ಎಸ್.ಪಿ ಪ್ರಶಂಸಿಸಿದ್ದಾರೆ.
Smart Traffic | ಟ್ರಾಫಿಕ್ ನಿಯಮ ಉಲ್ಲಂಘಿಸುವ ಮುನ್ನ ಎಚ್ಚರ, ಮನೆಗೆ ಬರಲಿದೆ ದಂಡದ ನೋಟಿಸ್, ಯಾವಾಗಿಂದ ಅನ್ವಯ?