ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಒಂದೇ ಕ್ಲಿಕ್ ನಲ್ಲಿ ಹಲವು ಸುದ್ದಿಗಳನ್ನು ಓದುಗರಿಗೆ ನೀಡುವ ಪ್ರಯತ್ನವಿದು. ಇಲ್ಲಿ ಜಿಲ್ಲೆಯಲ್ಲಿ ನಡೆದ ಅದೆಷ್ಟೋ ಘಟನೆಗಳು ಗಮನಕ್ಕೆ ಬರುವುದಿಲ್ಲ. ಅಂತಹವುಗಳನ್ನು ನೀಡುವ ಪ್ರಯತ್ನ ಮಾಡಲಾಗುವುದು.
ಸೆ.7ರಂದು ಪವರ್ ಕಟ್
SHIMOGA: ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.7ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಸಂತೆಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ
READ | ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧದ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಆದೇಶ
ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್, ಅರ್ಜಿ ಆಹ್ವಾನ
SAGAR: ಸಾಗರ ಸಮಾಜ ಕಲ್ಯಾಣ ಇಲಾಖೆಯು ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ನೇಮಕಾತಿ ಮತ್ತು ಅವರ ಪುನರ್ವಸತಿ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರುಗಳನ್ನು 3 ವರ್ಷದ ಅವಧಿಗಳಿಗೆ ಒಮ್ಮೆ ಬದಲಾಯಿಸಿ ಹೊಸದಾಗಿ ಸಮಿತಿ ರಚಿಸಲು ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ತೊಡಗಿಸಿಕೊಂಡು ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಿರುವ ಅನುಸೂಚಿತ ಜಾತಿಗೆ ಸೇರಿದ ಇಬ್ಬರು ವ್ಯಕ್ತಿಗಳನ್ನು ಸಮಿತಿಗೆ ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತಿಯುಳ್ಳವರು ನಿಗದಿತ ನಮೂನೆ ಅರ್ಜಿಯನ್ನು ಸಾಗರ ಸಮಾಜ ಕಲ್ಯಾಣ ಇಲಾಖೆ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ.22 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 94480843192 ನ್ನು ಸಂಪರ್ಕಿಸುವುದು.
ಸೆ.8ರೊಳಗೆ ಅರ್ಜಿ ಸಲ್ಲಿಸಿ
SHIMOGA: ಮಾಜಿ ಸೈನಿಕರ ಕಲ್ಯಾಣ ಯೋಜನೆಗಳಿಗೆ ಪೂರಕವಾಗಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸೈನಿಕ ಮಂಡಳಿಯನ್ನು ಪುನರ್ರಚಿಸಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಮಾಜಿ ಸೈನಿಕರು ಜಿಲ್ಲಾ ಸೈನಿಕ ಮಂಡಳಿಯಲ್ಲಿ ವೇತನ-ಭತ್ಯೆ ರಹಿತವಾಗಿ ಸ್ವ-ಇಚ್ಛೆಯಿಂದ ಕಾರ್ಯ ನಿರ್ವಹಿಸಲು ಆಸಕ್ತಿಯುಳ್ಳವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸ್ವವಿವರಗಳನ್ನೊಳಗೊಂಡ ಅರ್ಜಿಯನ್ನು ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಗೆ ಖುದ್ದಾಗಿ ಸೆ.8 ರೊಳಗಾಗಿ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.
READ | ಪೊಲೀಸರ ದಿಢೀರ್ ದಾಳಿ, ಹೊರ ರಾಜ್ಯದವನೂ ಸೇರಿ ಐವರ ಬಂಧನ
ಮಾಂಸ ಮಾರಾಟ ನಿಷೇಧ
SHIMOGA: ಸೆ.6 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ (Shri krishna janmashthami) ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.