ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನೋಂದಾಯಿತ ಆಟೋರಿಕ್ಷಾ ಚಾಲಕರ ಮತ್ತು ಮಾಲೀಕರುಗಳ ಸಂಘಗಳ ಪದಾಧಿಕಾರಿಗಳು ಮತ್ತು ಪರವಾನಗಿ ಕೋರಿರುವ ಆಟೋರಿಕ್ಷಾ ಚಾಲಕರು ಮತ್ತು ಮಾಲೀಕರುಗಳ ಸಭೆಯನ್ನು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳು ನಡೆಸಿದರು.
ನಗರದ ಕೆಲವು ಆಟೋ ರಿಕ್ಷಾ ಚಾಲಕರುಗಳು ಮತ್ತು ಮಾಲೀಕರುಗಳು ಜಿಲ್ಲಾಧಿಕಾರಿಗಳಿಗೆ ಹಾಗೂ ಆರ್.ಟಿಓ ಕಚೇರಿಯಲ್ಲಿ ತಾವುಗಳು ಮಾಲೀಕತ್ವ ಹೊಂದಿರುವ ಆಟೋರಿಕ್ಷಾಗಳಿಗೆ ಪರವಾನಗಿಯನ್ನು ನೀಡುವಂತೆ ಕೋರಿರುತ್ತಾರೆ.
READ | ಶಿವಮೊಗ್ಗದಲ್ಲಿ ಅನಧಿಕೃತ ರೈಲ್ವೆ ಟಿಕೆಟ್ ಬುಕಿಂಗ್ ಗ್ಯಾಂಗ್ ಪತ್ತೆ, ಮೂವರು ಅರೆಸ್ಟ್, ಎಲ್ಲೆಲ್ಲಿ ದಾಳಿ?
ಈ ಹಿನ್ನೆಲೆಯಲ್ಲಿ ಸಭೆಯನ್ನು ಕರೆಯಲಾಗಿದ್ದು, ಸಂಘಗಳ ವತಿಯಿಂದ ಆಗಮಿಸಿದ್ದ ಪದಾಧಿಕಾರಿಗಳು ಸಭೆಯಲ್ಲಿ ಮಾತನಾಡಿ, “ಈಗಾಗಲೇ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಆಟೋ ರಿಕ್ಷಾಗಳು ಸಂಚರಿಸುತ್ತಿವೆ. ಪುನಃ ಪರವಾನಗಿಗಳನ್ನು ನೀಡಿದಲ್ಲಿ ಪರವಾನಗಿಯ ಮೇಲೆ ವ್ಯವಹಾರಗಳು ಏರ್ಪಡುತ್ತವೆ. ಇದರಿಂದಾಗಿ ಜೀವನೋಪಾಯಕ್ಕಾಗಿ ಆಟೋ ರಿಕ್ಷಾ ಓಡಿಸುತ್ತಿರುವ ನೈಜ ಚಾಲಕರು ಮತ್ತು ಮಾಲೀಕರುಗಳಿಗೆ ತೀವ್ರ ತೊಂದರೆ ಉಂಟಾಗುತ್ತದೆ. ಆದಕಾರಣ ದಯವಿಟ್ಟು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋ ರಿಕ್ಷಾ ಪರವಾನಿಗೆಯನ್ನು ನೀಡಬಾರದು” ಎಂದು ಲಿಖಿತವಾಗಿ ಮನವಿಯನ್ನು ಸಲ್ಲಿಸಿರುತ್ತಾರೆ.
ನೋಂದಾಯಿತ ಸಂಘಗಳ ಲಿಖಿತ ಮನವಿಯೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದ ಕಡತವನ್ನು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಅಧ್ಯಕ್ಷೆ ಸಮ್ಮುಖದಲ್ಲಿ ಮಂಡಿಸಿ ಅಧ್ಯಕ್ಷರ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Western Ghats | ಚಿಲಿ ಮಾದರಿಯ ಅಗ್ನಿ ಅವಘಡ ಪಶ್ಚಿಮಘಟ್ಟದಲ್ಲಿ ಸಂಭವಿಸುವ ಸಂಭವ, ಎಚ್ಚರಿಕೆ ನೀಡಿದ ನಾಗೇಶ್ ಹೆಗಡೆ