ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದಲ್ಲಿ ‘ಸೌಹಾರ್ದವೇ ಹಬ್ಬ’ ನಡಿಗೆಯನ್ನು ಸೆ.15ರಂದು ಸಂಜೆ 4ರಿಂದ 6 ಗಂಟೆಯವರೆಗೆ ಆಯೋಜಿಸಲಾಗಿದೆ ಎಂದು ನಮ್ಮ ನಡೆಗೆ ಶಾಂತಿಯ ಕಡೆಗೆ ಸಮಿತಿಯ ಸಂಚಾಲಕ ಕೆ.ಪಿ. ಶ್ರೀಪಾಲ್ ಹೇಳಿದರು.
READ | ಗಣೇಶ ಹಬ್ಬದ ಪ್ರಯುಕ್ತ ವಿಶೇಷ ರೈಲು, ಇಲ್ಲಿದೆ ವೇಳಾಪಟ್ಟಿ
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಗಣಪತಿ (Ganesh Festival) ಮತ್ತು ಈದ್ ಮಿಲಾದ್ (Eid Milad) ಹಬ್ಬಗಳ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಶಾಂತಿ ಕಾಪಾಡಲು ನಮ್ಮ ನಡೆಗೆ ಶಾಂತಿಯ ಕಡೆಗೆ ಸಮಿತಿ ವತಿಯಿಂದ ಮೆಗ್ಗಾನ್ ಆಸ್ಪತ್ರೆಯ ಆವರಣದಿಂದ ಸೈನ್ಸ್ ಮೈದಾನದವರೆಗೆ ಸೌಹಾರ್ದವೇ ಹಬ್ಬ ನಡಿಗೆ ಮತ್ತು ಶಾಂತಿ ಸಭೆ ಆಯೋಜಿಸಲಾಗಿದೆ ಎಂದರು.
10 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ
ಸೈನ್ಸ್ ಮೈದಾನದವರೆಗೆ ನಡೆಯುವ ಈ ಹಬ್ಬದಲ್ಲಿ ಸುಮಾರು 10 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಧಾರ್ಮಿಕ ಮುಖಂಡರು ಇದರಲ್ಲಿ ಪಾಲ್ಗೊಳ್ಳುತ್ತಾರೆ ಎಂದರು.
ತ್ರಿವರ್ಣ ಧ್ವಜ ಹಿಡಿದು ನಡಿಗೆ
ನಡಿಗೆಯಲ್ಲಿ ತ್ರಿವರ್ಣ ಧ್ವಜ ಬಿಟ್ಟು ಬೇರೆ ಯಾವುದೇ ರೀತಿಯ ಧ್ವಜಗಳಿಗಾಗಲಿ, ಬ್ಯಾನರ್ಗಳಿಗಾಗಲಿ ಅವಕಾಶ ಇಲ್ಲ ಎಂದು ತಿಳಿಸಿದರು.
ರೈತ ಮುಖಂಡ ಹೆಚ್.ಆರ್. ಬಸವರಾಜಪ್ಪ, ಧರ್ಮಗುರು ಅಬ್ದುಲ್ ಲತೀಫ್ ಸಾದಿ, ಗುರುಮೂರ್ತಿ, ಫಾ. ಕ್ಲಿಫರ್ಡ್ ರೋಷನ್ ಪಿಂಟೋ, ಕಿರಣ್ ಕುಮಾರ್, ಕೃಷ್ಣಮೂರ್ತಿ, ವಸೀಫ್, ಹರತಾಳು ಸುರೇಶ್ ಇತರರು ಉಪಸ್ಥಿತರಿದ್ದರು.