ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಸೈನ್ಸ್ ಮೈದಾನದಲ್ಲಿ ಸೆ.15ರಂದು ನಡೆಯಬೇಕಿದ್ದ ಬೃಹತ್ ಉದ್ಯೋಗ ಮೇಳವನ್ನು ಮುಂದೂಡಿರುವ ಬಗ್ಗೆ ಉದ್ಯೋಗ ವಿನಿಮಯ ಅಧಿಕಾರಿ ಪ್ರಕಟಣೆ ಹೊರಡಿಸಿದ್ದರು. ಅದರ ಬೆನ್ನಲ್ಲೇ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ದರ್ಜೆ-1 ಅವರೂ ಪತ್ರಿಕೆ ಪ್ರಕಟಣೆ ಬಿಡುಗಡೆ ಮಾಡಿದ್ದು ಅದರಲ್ಲಿ ಮುಂದೂಡಿಕೆ ಕಾರಣವನ್ನು ತಿಳಿಸಿದ್ದಾರೆ.
ಉದ್ಯೋಗ ಮೇಳ ಮುಂದೂಡಿಕೆಗೇನು ಕಾರಣ?
ಗೌರಿ ಗಣೇಶ ಹಬ್ಬವಿರುವುದರಿಂದ ಉದ್ಯೋಗ ಮೇಳಕ್ಕೆ ಹಾಜರಾಗುವ ಆಕಾಂಕ್ಷಿಗಳ ಪ್ರಮಾಣ ಕಡಿಮೆಯಾಗುವ ಕಾರಣದಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ನಂತರ ನಡೆಯುವ ಮೇಳದ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.
ಬೃಹತ್ ಉದ್ಯೋಗ ಮೇಳದಲ್ಲಿ5 ಸಾವಿರಕ್ಕೂ ಅಧಿಕ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇರುವುದರಿಂದ ಉದ್ಯೋಗ ಆಕಾಂಕ್ಷಿಗಳು ಕುತೂಹಲದಿಂದ ಕಾಯುತ್ತಿದ್ದಾರೆ.