ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಹಾನಗರ ಪಾಲಿಕೆ(shimoga ciry corporation)ಯಿಂದ ಆಚರಿಸಲಾಗುತ್ತಿರುವ ದಸರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ದಸರಾ ಸಮಿತಿ ವತಿಯಿಂದ ಅ.20ರಿಂದ ನಾಲ್ಕು ದಿನಗಳ ಕಾಲ ವೈಭವದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತಿದೆ ಎಂದು ಸಾಂಸ್ಕೃತಿಕ ದಸರಾ ಸಮಿತಿ ಅಧ್ಯಕ್ಷ ಇ.ವಿಶ್ವಾಸ್ (E.Vishwas) ತಿಳಿಸಿದರು.
ಪಾಲಿಕೆ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.20ರ ಸಂಜೆ 5ರಿಂದ ರಾತ್ರಿ 9.30ರ ವರೆಗೆ ಕಮಲಾ ನೆಹರು ಮಹಿಳಾ ಕಾಲೇಜಿನಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್ ಸುಂದರರಾಜ್ ನೇತೃತ್ವದಲ್ಲಿ ವಚನ ಸಾಹಿತ್ಯ, ದಾಸ ಸಾಹಿತ್ಯ ಹಾಗೂ ಕವಿಗೋಷ್ಠಿ ನಡೆಯ ಲಿದ್ದು, ಖ್ಯಾತ ವಕೀಲ ಎಂ.ಆರ್.ಸತ್ಯನಾರಾಯಣ ಉದ್ಘಾಟಿಸಲಿದ್ದಾರೆ ಎಂದರು.
ಮುಖ್ಯ ಅತಿಥಿಯಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ ಬಿಜೆಪಿ ನಗರಾಧ್ಯಕ್ಷ ಜಗದೀಶ್, ಆಯುಕ್ತ ಕೆ. ಮಾಯಣ್ಣ ಗೌಡ, ಪಾಲಿಕೆ ಸದಸ್ಯರಾದ ಎಸ್. ಜ್ಞಾನೇಶ್ವರ್, ಸುನೀತಾ ಅಣ್ಣಪ್ಪ, ರಾಹುಲ್ ಪಿ. ಬಿದರೆ, ಕಲ್ಪನಾ ರಮೇಶ್ ಹಾಗೂ ಇನ್ನಿತರರು ಭಾಗವಹಿಸಲಿದ್ದು, ಅಧ್ಯಕ್ಷತೆ ಯನ್ನು ಮೇಯರ್ ಎಸ್. ಶಿವಕುಮಾರ್ ವಹಿಸಲಿದ್ದಾರೆ ಎಂದರು.
READ | ಶಿವಮೊಗ್ಗದಿಂದ ದೇಶದ ಮೂರು ಪ್ರಮುಖ ರಾಜ್ಯಗಳಿಗೆ ವಿಮಾನ ಸಂಚಾರಕ್ಕೆ ಡೇಟ್ ಫಿಕ್ಸ್, ಇಲ್ಲಿದೆ ವೇಳಾಪಟ್ಟಿ
ಯಾವ ದಿನ ಏನು ಕಾರ್ಯಕ್ರಮ?
- ಅ.22ರ ಸಂಜೆ 5.30ಕ್ಕೆ ಫ್ರೀಡಂ ಪಾರ್ಕ್(shimoga freedom park)ನಲ್ಲಿ ನಡೆಯುವ ನಾಟ್ಯ ವೈವಿಧ್ಯ ಹಾಗೂ ಸಂಗೀತ ಸಂಭ್ರಮ ಕಾರ್ಯಕ್ರಮವನ್ನು ಖ್ಯಾತ ಚಿತ್ರನಟ ಅಜೇಯ್ ರಾವ್ (Ajay Rao)ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಶಾರದಾ ಪೂರ್ಯಾನಾಯ್ಕ, ಎಸ್. ರುದ್ರೇಗೌಡ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಆಯುಕ್ತ ಕೆ. ಮಾಯಣ್ಣ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮೇಯರ್ ಎಸ್. ಶಿವಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರ ನಾಯಕ್ ಆಗಮಿಸಲಿದ್ದು, ಸಮಿತಿಯ ಅಧ್ಯಕ್ಷ ಇ. ವಿಶ್ವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ನಂತರ ಪ್ರಹ್ಲಾದ್ ದೀಕ್ಷಿತ್ ನೇತೃತ್ವದಲ್ಲಿ ರಾಗರಂಜಿನಿ ತಂಡದವರಿಂದ ಸಂಗೀತ ಸಂಭ್ರಮ ಹಾಗೂ ಸ್ಥಳೀಯ ನೃತ್ಯ ಶಾಲಾ ಮಕ್ಕಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ.
- ಅ.23ರ ಸಂಜೆ 5.30ಕ್ಕೆ ಫ್ರೀಡಂ ಪಾರ್ಕ್ನಲ್ಲಿ ನಡೆ ಯುವ ಸಂಗೀತ ಹಾಗೂ ಜಾನಪದ ವೈಭವ ಕಾರ್ಯ ಕ್ರಮವನ್ನು ಖ್ಯಾತ ಚಿತ್ರನಟ ವಿಜಯರಾಘವೇಂದ್ರ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಎಸ್.ಎನ್ ಚನ್ನಬಸಪ್ಪ ವಹಿಸಲಿ ದ್ದಾರೆ. ಮುಖ್ಯ ಅತಿಥಿಯಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶಾಸಕರಾದ ಬಿ.ವೈ. ವಿಜಯೇಂದ್ರ, ಡಿ.ಎಸ್ ಅರುಣ್, ಆಯುಕ್ತ ಕೆ.ಮಾಯಣ್ಣ ಗೌಡ, ಮಾಜಿ ಶಾಸಕ ಕೆ.ಬಿ. ಅಶೋಕ ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಆಗಮಿಸಲಿದ್ದಾರೆ. ನಂತರ ಜೋಗಿ ಸುನೀತಾ, ಮಂಗಳಾ ರವಿ ಹಾಗೂ ಕಲಾತ್ಮಕ ತಂಡದವರಿಂದ ಸಂಗೀತ ವೈಭವ ಮತ್ತು ನಾಗರಾಜ್ಮೂರ್ತಿ ತಂಡದ ವರಿಂದ ಜಾನಪದ ವೈಭವ ನಡೆಯಲಿದೆ. ಅದೇ ದಿನ ಸಂಜೆ 5ರಿಂದ ರಾತ್ರಿ 10 ಗಂಟೆಯವರೆಗೆ ಕುವೆಂಪು ರಂಗಮಂದಿರದಲ್ಲಿ ಯಕ್ಷ ದಸರಾ ನಡೆಯಲಿದ್ದು, ಶಿವಮೊಗ್ಗದ ಯಕ್ಷ ಸಂವರ್ಧನಾದ ಕಾರ್ಯದರ್ಶಿ ಶ್ರೀನಿವಾಸ ಆಚಾರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಉಪಮೇಯರ್ ಲಕ್ಷ್ಮಿ ಶಂಕರ ನಾಯಕ್ ವಹಿಸಲಿದ್ದಾರೆ. ನಂತರ, ಯಕ್ಷ ಸಂವ ರ್ಧನಾ ತಂಡದವರಿಂದ ಲಕ್ಷ್ಮಿ ವಿವಾಹ ಹಾಗೂ ಮಹಾ ಗಣಪತಿ ಯಕ್ಷ ಕಲಾ ಬಳಗದವರಿಂದ ಬಲರಾಮ ಗರ್ವ ಭಂಗ ಪ್ರಸಂಗ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದರು.
- ಅ.24ರಂದು ಸಂಜೆ 5 ಗಂಟೆಗೆ ಫ್ರೀಡಂ ಪಾರ್ಕ್ನಲ್ಲಿ ಶಂಕರ್ ಶ್ಯಾನಭಾಗ್ ಮತ್ತು ಸಂಗಡಿಗರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದರು.
ಶಾಸಕ ಎಸ್.ಎನ್. ಚನ್ನಬಸಪ್ಪ, ಪಾಲಿಕೆ ಸದಸ್ಯೆ ಸುನೀತಾ ಅಣ್ಣಪ್ಪ, ಸಮಿತಿಯ ಸದಸ್ಯ ಕಾರ್ಯದರ್ಶಿ ಸಿ.ಆರ್.ಸಿದ್ದಪ್ಪ ಉಪಸ್ಥಿತರಿದ್ದರು.
Book My HSRP | ಎಚ್.ಎಸ್.ಆರ್.ಪಿಗೆ ಅರ್ಜಿ ಸಲ್ಲಿಕೆ ಹೇಗೆ, ಏನಿದು ಅತಿ ಸುರಕ್ಷಿತ ನೋಂದಣಿ ಫಲಕ? ಇಲ್ಲಿದೆ ವಿವರ