ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಗಿಗುಡ್ಡ(Ragigudda)ದಲ್ಲಿ ಕಲ್ಲು ತೂರಾಟ ಪ್ರಕರಣ ಬಳಿಕ ಪೊಲೀಸ್ ಇಲಾಖೆ ಸೋಶಿಯಲ್ ಮೀಡಿಯಾಗಳ ಮೇಲೆ ಕಣ್ಣಿಟ್ಟಿದ್ದಾರೆ. ಈಗಾಗಲೇ ಇಲ್ಲಸಲ್ಲದ ವಿಡಿಯೋಗಳನ್ನು ಶೇರ್ ಮಾಡುವವರ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗುತ್ತಿದೆ.
READ | ರಾಗಿಗುಡ್ಡ ಕಲ್ಲು ತೂರಾಟ ಪ್ರಕರಣ, ಇನ್ಸ್ಪೆಕ್ಟರ್ ಸೇರಿ ನಾಲ್ವರ ತಲೆದಂಡ
ಚಿಕ್ಕಮಗಳೂರು ವಿಡಿಯೋ ಶೇರ್ ಮಾಡಿದವನ ವಿರುದ್ಧ ಕೇಸ್
‘ಶಿವಮೊಗ್ಗದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುತ್ತಾರೆಂಬ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಘಟನೆಯು ಶಿವಮೊಗ್ಗಕ್ಕೆ ಸಂಬಂಧಿಸಿದ್ದಾಗಿರದೇ, ಸೆ.3ರಂದು ಚಿಕ್ಕಮಗಳೂರಿನ ಗೌರಿಕಾಲುವೆ ಬಡಾವಣೆಯಲ್ಲಿ ಗಲ್ಲಿ ಕ್ರಿಕೇಟ್ ಆಡುವಾಗ ನಡೆದ ಘಟನೆಯಾಗಿರುತ್ತದೆ. ಈ ಬಗ್ಗೆ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣವೂ ಸಹಾ ದಾಖಲಾಗಿರುತ್ತದೆ. ನೈಜ ಸುದ್ದಿಗಳನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಮತ್ತು ಈ ಸುದ್ಧಿಯನ್ನು ತಿರುಚಿ ವೈರಲ್ ಮಾಡಿದವರ ವಿರುದ್ಧ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.