ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಗಳ ವತಿಯಿಂದ 2023-24 ನೇ ಸಾಲಿನಲ್ಲಿ ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಗಳಿಗೆ ಅರ್ಜಿ ಆಹ್ವಾನಿಲಾಗಿದೆ.
ಆಸಕ್ತ ಫಲಾಪೇಕ್ಷಿಗಳು ಅಗತ್ಯ ದಾಖಲೆಗಳೊಂದಿಗೆ ವೆಬ್ಸೈಟ್ https://sevasindhu.karnataka.gov.in ರ ಮೂಲಕ ನ.29 ರೊಳಗೆ ಅರ್ಜಿಗಳನ್ನು ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-276776 ನ್ನು ಸಂಪರ್ಕಿಸುವುದು.
READ | ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನೇಣಿಗೆ ಶರಣಾಗಿದ್ದ ಬಾಲಕಿ, ಆರೋಪಿಗೆ ಶಿಕ್ಷೆ ಪ್ರಕಟಿಸಿದ ಕೋರ್ಟ್
ಅಕಾಡೆಮಿ ಬಾಲಗೌರವ ಪ್ರಶಸ್ತಿ
SHIMOGA: ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿ (Karnataka State Child Development Academy) ಯಿಂದ 2023-24ನೇ ಸಾಲಿನ ಬಾಲಗೌರವ ಪ್ರಶಸ್ತಿ (bala gourava award) ಕೊಡಮಾಡುತ್ತಿದ್ದು, ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದೊಳಗಿನ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ.
ಕ್ರೀಡೆ, ನೃತ್ಯ, ಸಂಗೀತ, ಚಿತ್ರಕಲೆ, ಬಹುಮುಖ ಪ್ರತಿಭೆ ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ ಹೀಗೆ ಆರು ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದು ಪುರಸ್ಕೃತರಾಗಿರಬೇಕು.
ಆಸಕ್ತ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ನ.18 ರೊಳಗಾಗಿ ಯೋಜನಾಧಿಕಾರಿಗಳು, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಎಚ್.ಬಿ.ಕಾಲೋನಿ, ಲಕಮನಹಳ್ಳಿ, ಧಾರವಾಡ- 580004, ಈ ವಿಳಾಸಕ್ಕೆ ಪೋಸ್ಟ್ ಮುಖಾಂತರ ಸಲ್ಲಿಸುವುದು. ಅರ್ಜಿ ನಮೂನೆ ಹಾಗೂ ಪ್ರಶಸ್ತಿಗೆ ಮಾನದಂಡವನ್ನು ವೆಬ್ಸೈಟ್ http://balavikasaacademy.karnataka.gov.in ರಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಯೋಜನಾಧಿಕಾರಿಗಳು, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಹೆಚ್.ಬಿ.ಕಾಲೋನಿ, ಲಕಮನಹಳ್ಳಿ, ಧಾರವಾಡ-580004, ದೂ.ಸಂ.: 0836-2461666 ನ್ನು ಸಂಪರ್ಕಿಸುವುದು.
ಇಂದು ಪವರ್ ಕಟ್
SHIMOGA: ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5 ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ನ.5 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಹೊಸಮನೆ, ಜೈಲ್ ರಸ್ತೆ, ಕುವೆಂಪು ರಸ್ತೆ, ಯುನಿಟಿ ಆಸ್ಪತ್ರೆ, ಶಿವಶಂಕರ್ ಗ್ಯಾರೇಜ್, ದೈವಜ್ಞ ಕಲ್ಯಾಣ ಮಂದಿರ, ಸುಬ್ಬಯ್ಯ ಆಸ್ಪತ್ರೆ, ನರ್ಸ್ ಕ್ವಾಟ್ರಸ್, ಆಯುರ್ವೇದ ಆಸ್ಪತ್ರೆ, ಸಾಗರ ರಸ್ತೆ ಸುರಂಗ, ಬಿ.ಎಸ್.ಎನ್.ಎಲ್ ಕ್ವಾಟ್ರಸ್, ಗೊಮ್ಮಟೇಶ್ವರ ದೇವಸ್ಥಾನ, ಎಸ್.ಪಿ ಕಚೇರಿ, ಪೊಲೀಸ್ ಠಾಣೆ, ಪೊಲೀಸ್ ಕ್ವಾಟ್ರಸ್, ಸಾಗರ ಮುಖ್ಯ ರಸ್ತೆ, ಅಶೋಕ ನಗರ, ಎ.ಆರ್.ಬಿ ಕಾಲೋನಿ, ನಾಗರಾಜಪುರ ಬಡಾವಣೆ, ಕುವೆಂಪು ರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಸವರ್ಲೈನ್ ರಸ್ತೆ, ಎಲ್.ಐ.ಸಿ ಕಚೇರಿ, ಮಿಷನ್ ಕಾಂಪೌಂಡ್, ಜೈಲ್ ಸರ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.