Digital library | ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಶುಭ ಸುದ್ದಿ | ಶಿವಮೊಗ್ಗದಲ್ಲಿದ್ದಾರೆ 4 ಕೋಟಿ ಡಿಜಿಟಲ್ ಓದುಗರು!

Madhu bangarappa 1 1

 

 

ಸುದ್ದಿ ಕಣಜ.ಕಾಂ ಸೊರಬ
SORABA: ಶಿವಮೊಗ್ಗದ ನಗರ ಕೇಂದ್ರ ಗ್ರಂಥಾಲಯದ (Shimoga city Central library) ಸಮಯವನ್ನು ಸ್ಪರ್ಧಾತ್ಮಕ ಪರೀಕ್ಷೆಗಾಗಿ ಓದುತ್ತಿರುವವರ ಅನುಕೂಲಕ್ಕಾಗಿ ಹೆಚ್ಚಿಸುವ ಯೋಚನೆ ಇದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು.

JOBS FB Linkಸೊರಬದ ರಂಗ ಮಂದಿರದಲ್ಲಿ ಸೋಮವಾರ ಏರ್ಪಡಿಸಿದ್ದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾ/ಕೇಂದ್ರ ಗ್ರಂಥಾಲಯ ಶಿವಮೊಗ್ಗ ಇವರ ಸಹಯೋಗದೊಂದಿಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಸಮಾರೋಪ ಮತ್ತು ಸಿಬ್ಬಂದಿ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

READ | ಬೆರಳಚ್ಚು, ಶೀಘ್ರ ಲಿಪಿಕಾರ ಹುದ್ದೆ ಭರ್ತಿಗೆ ಅಧಿಸೂಚನೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ನಗರ ಕೇಂದ್ರ ಗ್ರಂಥಾಲಯದಲ್ಲೇ ಅನೇಕರು ಊಟ ಕಟ್ಟಿಕೊಂಡು ಬಂದು ಬೆಳಗ್ಗೆಯಿಂದ ಸಂಜೆಯವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವುದನ್ನು ನೋಡಿದ್ದೇನೆ. ಅನೇಕರು ಹೊರಗಡೆ ಕೆಲಸ ಮಾಡಿ ಸಂಜೆ ಹೊತ್ತು ಗ್ರಂಥಾಲಯಕ್ಕೆ ಬಂದು ಓದುತ್ತಾರೆ. ಗ್ರಂಥಾಲಯದ ಬಳಿ ರೂಮ್ ಮಾಡಿಕೊಂಡು ಓದುವವರು ಇದ್ದಾರೆ. ಹೀಗೆ ಕೆಲಸಕ್ಕಾಗಿ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಓದುಗರಿಗೆ ಅನುಕೂಲವಾಗುವ ಪುಸ್ತಕಗಳು, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಪ್ರಸ್ತುತ ಗ್ರಂಥಾಲಯದ ವೇಳೆ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಇದ್ದು, ಸಂಜೆ ಹೊತ್ತಿನ ಓದುಗರಿಗೆ ಅನುಕೂಲವಾಗುವ ರೀತಿ ಸಮಯ ಹೆಚ್ಚಳ ಮತ್ತು ಪೂರಕ ವ್ಯವಸ್ಥೆಗಳ ವಿವರಣೆ ಪಡೆದುಕೊಂಡು ಬದಲಾವಣೆಯನ್ನು ಮಾಡಲಾಗುವುದು ಎಂದರು.

ಓದುವ ಸಂಸ್ಕ್ಕತಿಯನ್ನು ಹೆಚ್ಚಿಸಲು 14 ರಿಂದ 2೦ ರವರೆಗೆ ಗ್ರಂಥಾಲಯ ಸಪ್ತಾಹ ಹಮ್ಮಿಕೊಳ್ಳಲಾಗಿದೆ. ಸಪ್ತಾಹದಲ್ಲಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಪ್ರಬಂಧ, ಕಥೆ ಹೇಳುವ, ಪುಸ್ತಕ ಓದುವ ಹೀಗೆ ಓದನ್ನು ಉತ್ತೇಜಿಸುವಂತಹ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಡಾ. ಸತೀಶ್ ಕುಮಾರ ಎಸ್.ಹೊಸಮನಿ, ನಿರ್ದೇಶಕ, ಸಾರ್ವಜನಿಕ ಗ್ರಂಥಾಲಯ ಇಲಾಖೆ

4 ಕೋಟಿ ಡಿಜಿಟಲ್‌ ಸದಸ್ಯತ್ವ
ಮೊಬೈಲ್ ಅನ್ನು ಕಲಿಕೆಗಾಗಿ ಸದ್ಬಳಕೆ ಮಾಡಿಕೊಳ್ಳುಬಹುದು. 4 ಕೋಟಿ ಜನರು ಡಿಜಿಟಲ್ ಗ್ರಂಥಾಲಯದ ಸದಸ್ಯತ್ವ ಪಡೆದಿದ್ದು, ಶೀಘ್ರದಲ್ಲಿಯೇ ಸಕ್ರಿಯ ಗೊಳಿಸಲಾಗುವುದು. ಹೊರದೇಶದವರು ಡಿಜಿಟಲ್ ಗ್ರಂಥಾಲಯದ ಮೂಲಕ ಕನ್ನಡ ಪುಸ್ತಕವನ್ನು ಓದಬಹುದು ಎಂದು ತಿಳಿಸಿದರು.
ದೇಶದಲ್ಲೇ ಅತಿ ಹೆಚ್ಚು ಗ್ರಂಥಾಲಯ ಹೊಂದಿರುವ ರಾಜ್ಯ
ದೇಶದಲ್ಲೇ ಅತಿ ಹೆಚ್ಚು ಗ್ರಂಥಾಲಯಗಳನ್ನು ಹೊಂದಿರುವ ರಾಜ್ಯ ನಮ್ಮದು. ಅದರಲ್ಲೂ ನಮ್ಮ ಇಲಾಖೆ ಹೆಚ್ಚು ಸಂಖ್ಯೆಯ ಗ್ರಂಥಾಲಯಗಳನ್ನು ಹೊಂದಿದೆ. ಇಲಾಖಾ ವ್ಯಾಪ್ತಿಯಲ್ಲಿ 7 ಸಾವಿರಕ್ಕೂ ಹೆಚ್ಚು ಗ್ರಂಥಾಲಯಗಳಿದ್ದು, ಅವುಗಳಲ್ಲಿ 1300 ಗ್ರಂಥಾಲಯ ಶಿಕ್ಷಣ ಇಲಾಖೆ ಹಾಗೂ ಉಳಿದವು ಗ್ರಾಮ ಪಂಚಾಯಿತಿಗಳಿಗೆ ಸೇರಿದ್ದು, ಮೇಲ್ದರ್ಜೆಗೆ ಏರಿಸಲು ಕ್ರಮ ವಹಿಸಲಾಗುವುದು ಎಂದ ಅವರು ಬೆಂಗಳೂರಿನ ವೆಸ್ಟ್ ಜೋನ್ ಎಂಬ ಸರ್ಕಾರಿ ಗ್ರಂಥಾಲಯ ಎಲ್ಲಾ ಸೌಕರ್ಯಗಳನ್ನು ಹೊಂದಿದ್ದು, ಅತ್ಯಂತ ಸುಸಜ್ಜಿತವಾಗಿದೆ ಎಂದು ತಿಳಿಸಿದರು.
ಉತ್ತಮ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪ್ರದಾನ
ಇದೇ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ಗ್ರಂಥಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಚಿವರು ಪ್ರಶಸ್ತಿ ಪ್ರದಾನ ಮಾಡಲಾಯಿತು.
ಗ್ರಂಥಾಲಯದ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.
ಗ್ರಂಥಾಲಯ ಇಲಾಖೆಯ ವಿಶ್ರಾಂತ ನಿರ್ದೇಶಕ ಡಾ. ಪಿ.ವೈ ರಾಜೇಂದ್ರ ಕುಮಾರ್ ಹಾಗೂ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿ ನಿಕಟಪೂರ್ವ ಅಧ್ಯಕ್ಷ ಡಾ. ಕೆ.ವಿ. ಕೊಣ್ಣೂರು ಓದುವ ಪ್ರಾಮುಖ್ಯತೆ ಕುರಿತು ಮಾತನಾಡಿದರು.
ಪುರಸಭೆ ಅಧ್ಯಕ್ಷರು, ಗ್ರಂಥಾಲಯ ಇಲಾಖೆಯ ವಿಶ್ರಾಂತ ನಿರ್ದೇಶಕರಾದ ಟಿ. ಮಲ್ಲೇಶಪ್ಪ, ತಹಶೀಲ್ದಾರ್ ಹುಸೇನ್ ಎ ಸರಕಾವಸ್, ತಾ.ಪಂ. ಇ ಓ ಪ್ರದೀಪ್ ಕುಮಾರ್, ಭದ್ರಾವತಿ ರಾಮಾಚಾರಿ, ಮಂಜುನಾಥ್ ಇತರರು ಉಪಸ್ಥಿತರಿದ್ದರು.

Jumping spider | ಪಶ್ಚಿಮಘಟ್ಟದಲ್ಲಿ ಹೊಸ ಪ್ರಭೇದದ ‘ಜಂಪಿಂಗ್ ಸ್ಪೈಡರ್’ ಪತ್ತೆ

error: Content is protected !!