ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯ ಪ್ರವಾಸಿ ತಾಣಗಳ (shivamogga tourist places) ಅಭಿವೃದ್ಧಿಗೆ ಸಂಬಂಧಿಸಿದಂತೆ ನೆರೆಯ ಕಾರವಾರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖಾ ಸಚಿವರೊಂದಿಗೆ ಶೀಘ್ರದಲ್ಲಿ ಸಭೆ ನಡೆಸಿ, ಚರ್ಚಿಸಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ (Madhu S.Bangarappa) ಹೇಳಿದರು.
ಅವರು ಇಂದು ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ನಡೆದ ಅಧಿಕಾರಿಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
READ | ಝಿಕಾ ವೈರಸ್ ಸೋಂಕು, ಲಕ್ಷಣಗಳೇನು, ವಹಿಸಬೇಕಾದ ಎಚ್ಚರಿಕೆಗಳೇನು? ಪತ್ತೆ ಹೇಗೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ
ಮಧು ಬಂಗಾರಪ್ಪ ಸೂಚಿಸಿದ ಟಾಪ್ 5 ಅಂಶಗಳು
- ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ವಿಕಾಸಕ್ಕೆ ವಿಫುಲ ಅವಕಾಶಗಳಿದ್ದು, ಅವು ಅನುಷ್ಠಾನಗೊಳ್ಳದಿರುವುದು ಬೇಸರವೆನಿಸಿದೆ. ಜೋಗ, ಗುಡವಿ ಪಕ್ಷಿಧಾಮ(Guduvi Bird sanctuary), ಕವಿಶೈಲ (Kavishaila), ನಗರಕೋಟೆ (Nagara Fort), ಚಂದ್ರಗುತ್ತಿ (Chandragutti) ಸೇರಿದಂತೆ ಜಿಲ್ಲೆಯ ಇನ್ನೂ ಹಲವು ಪ್ರದೇಶಗಳನ್ನು ವಿಸ್ತೃತವಾಗಿ ಅಭಿವೃದ್ಧಿಪಡಿಸಿದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಬಹುದಾಗಿದೆ.
- ಕೆಲವು ಪ್ರವಾಸಿ ಕ್ಷೇತ್ರಗಳಿಗೆ ಕುಡಿಯುವ ನೀರು, ಶೌಚಾಲಯ, ವಿದ್ಯುತ್, ವಸತಿ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಲೇಬೇಕಾದ ಅಗತ್ಯವಿದೆ. ಗುಡವಿ ಪಕ್ಷಿಧಾಮವನ್ನು ಇನ್ನಷ್ಟು ರಚನಾತ್ಮಕವಾಗಿ ಮಾಡುವಲ್ಲಿ ಇರಬಹುದಾದ ಸಾಧ್ಯತೆಗಳ ಕುರಿತು ಕ್ರಿಯಾಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಅವರು ಪ್ರವಾಸೋದ್ಯಮ ಇಲಾಖೆಯ (Tourism department) ಸಹಾಯಕ ನಿರ್ದೇಶಕ ಧರ್ಮಪ್ಪ ಅವರಿಗೆ ಸೂಚಿಸಿದರು.
- ಚಂದ್ರಗುತ್ತಿಯಲ್ಲಿ ನಿರ್ಮಿಸಬೇಕಾಗಿದ್ದ ಯಾತ್ರಿ ನಿವಾಸ(Yatrik nivas)ಕ್ಕೆ ಅರಣ್ಯ ಇಲಾಖೆಯ (Forest department) ಅಡಚಣೆ ಇದೆ. ಅದನ್ನು ಇತ್ಯರ್ಥಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಿಯಮಾನುಸಾರ ಕಟ್ಟಡ ನಿರ್ಮಿಸಲು ಸಾಧ್ಯವಾದರೆ ಸರಿ. ತಪ್ಪಿದಲ್ಲಿ ಪರ್ಯಾಯ ಕ್ರಮಗಳನ್ನು ಕೈಗೊಂಡು ಚಂದ್ರಗುತ್ತಿ ಪ್ರದೇಶವನ್ನು ಆಕರ್ಷಕ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಬೇಕು. ಅಲ್ಲದೇ ಅಲ್ಲಿನ ಪರಿಸರವನ್ನು ಸದಾ ಹಸಿರಾಗಿರುವಂತೆ ಯೋಜನೆ ರೂಪಿಸಬೇಕು.
- ಸಿಗಂದೂರು ಯಾತ್ರಿ ನಿವಾಸ ಅಭಿವೃದ್ಧಿಪಡಿಸಿ, ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು. ಕೆಳದಿ ಕೋಟೆ, ಕುವೆಂಫು ಅವರ ಕುಪ್ಪಳಿ, ಕವಲೇದುರ್ಗ ಮುಂತಾದ ಪ್ರದೇಶಗಳಲ್ಲಿ ಕೈಗೊಂಡಿರುವ ಹಾಗೂ ಉದ್ದೇಶಿತ ಕಾಮಗಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
- ಕೆಲವು ಸ್ಥಳಗಳಲ್ಲಿನ ಅಭಿವೃದ್ಧಿಗೆ ಪುರಾತತ್ವ ಹಾಗೂ ಪ್ರಾಚ್ಯವಸ್ತು ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಅವರ ಸಲಹೆ ಪಡೆದುಕೊಳ್ಳಬೇಕು ಅಲ್ಲದೇ ಅಭಿವೃದ್ಧಿಗೆ ಅನುದಾನ ಪಡೆಯುವಲ್ಲಿ ಅವರ ಸಹಕಾರ ಪಡೆದುಕೊಳ್ಳಬೇಕು.
ಯಾತ್ರಿಕ ನಿವಾಸಗಳ ಕಾಮಗಾರಿ ಸ್ಥಗಿತ, ಸಮಸ್ಯೆ ಇತ್ಯರ್ಥಕ್ಕೆ ಅಧಿಕಾರಿ ನಿಯೋಜನೆ
ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಯಾತ್ರಿ ನಿವಾಸಗಳನ್ನು ನಿರ್ಮಿಸಲು ಅನುದಾನ ಬಿಡುಗಡೆಗೊಂಡಿದ್ದು, ಕೆಲವು ಕಡೆ ಕಟ್ಟಡ ನಿರ್ಮಾಣ ಕಾರ್ಯಾರಂಭಗೊಂಡಿದ್ದರೆ, ಇನ್ನೂ ಹಲವು ಕಡೆಗಳಲ್ಲಿ ನಿವೇಶನ, ಅರಣ್ಯ ಭೂಮಿ, ಸಂಬಂಧಿಸಿದ ಇಲಾಖೆಯ ಅನುಮತಿ ದೊರೆಯದ ಕಾರಣಕ್ಕಾಗಿ ನಿರ್ಮಾಣ ಕಾರ್ಯ ಸ್ಥಗಿತಗೊಂಡಿದೆ. ಇವೆಲ್ಲವುಗಳನ್ನು ಇತ್ಯರ್ಥಪಡಿಸಲು ಮುಜರಾಯಿ ಇಲಾಖೆಯ ಅಧಿಕಾರಿಗಳೊಬ್ಬರನ್ನು ಇದರ ಉಸ್ತುವಾರಿಗಾಗಿ ನಿಯೋಜಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ನಿಯೋಜಿತ ಅಧಿಕಾರಿಗಳು ಹಾಗೂ ಪ್ರವಾಸೋದ್ಯಮ ಇಲಾಖಾ ಅಧಿಕಾರಿಗಳು ಸಮಸ್ಯಾತ್ಮಕ ಸ್ಥಳಗಳಿಗೆ ಖುದ್ದು ಭೇಟಿ ನೀಡಿ, ಸಮಸ್ಯೆಗಳನ್ನು ಅರಿತು ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಗಮನಕ್ಕೆ ತಂದು ನಿರ್ಮಾಣ ಕಾರ್ಯ ತ್ವರಿತವಾಗಿ ಆರಂಭಗೊಳಿಸುವಂತೆ ಅವರು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸಿಸಿಎಫ್ ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Book My HSRP | ಎಚ್.ಎಸ್.ಆರ್.ಪಿಗೆ ಅರ್ಜಿ ಸಲ್ಲಿಕೆ ಹೇಗೆ, ಏನಿದು ಅತಿ ಸುರಕ್ಷಿತ ನೋಂದಣಿ ಫಲಕ? ಇಲ್ಲಿದೆ ವಿವರ