ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಓ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಶಿಕಾರಿಪುರ ತಾಲೂಕು ಸಂಕ್ಲಾಪುರ ವಾಸಿ ಸಾಕಮ್ಮ ವೆಂಕಟೇಶಪ್ಪ ಎಂಬುವವರ ಮನೆಯು 2021ರ ಮಹಾ ಮಳೆಯಿಂದ ಮೇಲ್ಚಾವಣಿ ಮತ್ತು ಗೋಡೆ ಕುಸಿದು ಬಿದ್ದ ಕಾರಣ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಪುನರ್ ನಿರ್ಮಾಣಕ್ಕಾಗಿ ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಿದ್ದು, ಈ ಕುರಿತು ಜಿಪಿಎಸ್ನಲ್ಲಿ ಮಾಹಿತಿ ಸಂಗ್ರಹಿಸಿ ವರದಿ ಮಾಡಲು ಬಗನಕಟ್ಟೆ ಗ್ರಾಮ ಪಂಚಾಯತಿ ಪಿಡಿಓ ಮಂಜುನಾಥನವರು ಸಾಕಮ್ಮರವರಿಂದ ₹20 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಅದರಲ್ಲಿ ₹13 ಸಾವಿರ ಪಡೆದು ಬಾಕಿ ಹಣವನ್ನು ಪಡೆಯುವಾಗ ಲೋಕಾಯುಕ್ತ ಪೊಲೀಸ್ರು ಬಂಧಿಸಿದ್ದಾರೆ
READ | ಶಿವಮೊಗ್ಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗಖಿಗೆ ಹಿಜಾಬ್ ಹಾಕುವಂತಿಲ್ಲ
ಯೋಜನೆ ಅನುಷ್ಠಾನಕ್ಕೆ ಲಂಚ
ಸಾಕಮ್ಮರವರಿಗೆ ಮನೆಯ ಪುನರ್ ನಿರ್ಮಾಣ ಕಾರ್ಯಕ್ಕೆ ರಾಜೀವ್ ಗಾಂಧಿ ವಸತಿ ಯೋಜನೆಯಡಿಯಲ್ಲಿ ₹5 ಲಕ್ಷಗಳ ಪರಿಹಾರ ಧನ ಮಂಜೂರಾಗಿದ್ದು, ಮನೆಯ ಪುನರ್ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದೆ. ನೆರೆ ಸಂತ್ರಸ್ತರ ಪುನರ್ ವಸತಿ ಯೋಜನೆಯಂತೆ ಕಂತಿನ ಹಣ ₹1 ಲಕ್ಷಗಳಣ್ನು ಬಿಡುಗಡೆ ಮಾಡಲು ಸಂಬಂಧ ಪಿ.ಡಿ.ಓ ಮಂಜುನಾಥ ಮತ್ತೊಮ್ಮೆ 6 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿರುತ್ತಾರೆ. ಸಾಕಮ್ಮನವರು ಶಿವಮೊಗ್ಗ ಲೋಕಾಯುಕ್ತ ಕಚೇರಿಗೆ ದೂರ ಕೊಟ್ಟ ಮೇರೆಗೆ ನ. 15 ರಂದು ಪ್ರಕರಣ ದಾಖಲಾಗಿರುತ್ತದೆ.
ರೆಡ್ ಹ್ಯಾಂಡ್ ಆಗಿದೆ ಸಿಲುಕಿದ ಪಿಡಿಓ
ನ. 16 ರಂದು ಬಗನಕಟ್ಟೆ ಗ್ರಾ.ಪಂ. ಪಿಡಿಓ ಮಂಜುನಾಥ ಇವರು ಸಾಕಮ್ಮರವರಿಂದ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ, ಲಂಚದ ಹಣ ₹6 ಸಾವಿರ ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆ ಕೈಗೊಂಡ ಪೊಲೀಸ್ ತಂಡ
ಪೊಲೀಸ್ ನಿರೀಕ್ಷಕ ಪ್ರಕಾಶ್ರವರು ಮುಂದಿನ ತನಿಖೆಯನ್ನು ಕೈಗೊಂಡಿರುತ್ತಾರೆ. ಶಿವಮೊಗ್ಗ ಲೋಕಾಯುಕ್ತ ಕಚೇರಿಯ ಪೊಲೀಸ್ ಅಧೀಕ್ಷಕ ಎನ್. ವಾಸುದೇವರಾಮರವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ, ಪೊಲೀಸ್ ನಿರೀಕ್ಷಕ ಎಸ್.ಎಸ್. ಸುರೇಶ್ ಮತ್ತು ಪೆÇಲೀಸ್ ಸಿಬ್ಬಂದಿಗಳಾದ ಎಸ್.ಕೆ. ಮಹಂತೇಶ್, ಬಿ.ಟಿ ಚನ್ನೇಶ , ಪ್ರಶಾಂತ್ ಕುಮಾರ್, ರಘುನಾಯ್ಕ ಕುಮಾರ್ , ದೇವರಾಜ್., ಪುಟ್ಟಮ್ಮ ಪ್ರದೀಪ್ ಕುಮಾರ್, ತರುಣ್ ಕುಮಾರ್ ಭಾಗವಹಿಸಿದ್ದರು.