ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದಲ್ಲಿ ಮತ್ತೆ ಸರಗಳ್ಳತನ ಗ್ಯಾಂಗ್ ಸಕ್ರಿಯವಾಗಿದ್ದು, ಒಂದೇ ದಿನ ಮೂರು ಕಡೆ ಸರಗಳ್ಳತನ ಮಾಡಿರುವ ಬಗ್ಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ಬುಧವಾರ ಬೆಳ್ಳಂಬೆಳಗ್ಗೆ ಸರಗಳ್ಳರ ತಂಡವೊಂದು, ಮೂರು ಕಡೆ ಮಹಿಳೆಯರ ಚಿನ್ನದ ಸರ ಅಪಹರಣ ಮಾಡಿರುವ ಘಟನೆ ನಡೆದಿದೆ.
ದೊಡ್ಡಪೇಟೆ ಪೊಲೀಸ್ ಠಾಣೆ (doddapete police station) ವ್ಯಾಪ್ತಿಯಲ್ಲಿ ಎರಡು ಮತ್ತು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಘಟನೆ ನಡೆದಿದೆ.
READ | ಮನೆ ಕಳ್ಳತನ ಗ್ಯಾಂಗ್ ಸೆರೆ, ಲಕ್ಷ ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಸೀಜ್
ಬೈಕಿನಲ್ಲಿ ಬಂದ ಮುಸುಕುಧಾರಿಗಳಿಂದ ಕೃತ್ಯ
ಬೈಕ್ ನಲ್ಲಿ ಆಗಮಿಸಿದ ಇಬ್ಬರು ಮುಸುಕುಧಾರಿಗಳಿಂದ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಬೆಳಗ್ಗೆ ವಾಕಿಂಗ್ ಹೋಗುವಾಗ, ರಂಗೋಲಿ ಹಾಕುವಾಗ, ಹಾಲು ತರಲೆಂದು ತೆರಳುವಾಗ, ದೇವಸ್ಥಾನಕ್ಕೆ ಹೋಗುವಾಗ ಘಟನೆ ನಡೆದಿವೆ. ಅದರಲ್ಲೂ ಎಲ್ಲ ಪ್ರಕರಣಗಳಲ್ಲಿ ಮಹಿಳೆಯರೇ ಟಾರ್ಗೆಟ್ ಆಗಿದ್ದಾರೆ.
ಎಲ್ಲೆಲ್ಲಿ ಘಟನೆ ನಡೆದಿದೆ?
ವಿನೋಬನಗರ ಪೊಲೀಸ್ ಠಾಣೆ (Vinoba nagar police station) ವ್ಯಾಪ್ತಿಯ 60 ಅಡಿ ರಸ್ತೆಯಲ್ಲಿ ಆಂಜನೇಯ ಸ್ವಾಮಿ ದೇವಾಲಯಕ್ಕೆ ಹೋಗಿ ಬರುತ್ತಿದ್ದ ಯುವತಿಯೋರ್ವಳ ಚಿನ್ನದ ಸರ ಅಪಹರಿಸಲಾಗಿದೆ. ಸರವು 8-10 ಗ್ರಾಂ ತೂಕದ್ದಾಗಿದೆ ಎಂದು ತಿಳಿದುಬಂದಿದೆ.
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶರಾವತಿನಗರದ ಆದಿಚುಂಚನಗಿರಿ ಶಾಲೆ ಸಮೀಪದ ಕಾಲಭೈರವೇಶ್ವರ ದೇವಾಲಯಕ್ಕೆ ಹೋಗಿ ಮನೆಗೆ ಬರುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಅಪಹರಿಸಲಾಗಿದೆ. ಸರವು ಸುಮಾರು 50 ಗ್ರಾಂ ತೂಕದ್ದಾಗಿದೆ ಎಂದು ಹೇಳಲಾಗಿದೆ. ಇದೇ ಠಾಣೆ ವ್ಯಾಪ್ತಿಯ ಮತ್ತೊಂದು ಕಡೆ ಘಟನೆ ನಡೆದಿದೆ.
ಕೋಟೆ ಪೊಲೀಸ್ (kote police station) ವ್ಯಾಪ್ತಿಯ ಓಲ್ಡ್ ಬಾರ್ ಲೈನ್ ರಸ್ತೆ(Old barline road)ಯಲ್ಲಿ ಮಂಗಳವಾರ ರಾತ್ರಿ ಹಾಲು ತೆಗೆದುಕೊಂಡು ಬರುತ್ತಿದ್ದ ಮಹಿಳೆಯ ಸರವನ್ನು ದೋಚಲಾಗಿದೆ. ಈ ಕುರಿತು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಎಲ್ಲ ಘಟನೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಶಿವಮೊಗ್ಗದಲ್ಲಿ ಸರಗಳ್ಳತನ ಮಾಡುತಿದ್ದ ರಾಜಸ್ಥಾನ ಮೂಲದ ಮೂವರು ಅರೆಸ್ಟ್, ಅವರ ಮೇಲಿತ್ತು ರಾಶಿ ರಾಶಿ ಕೇಸ್