ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಮಕ್ಕಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದ ನೆಲದ ಮೇಲೆ ಕೂಡಿಸುವಂತಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಮಕ್ಕಳಿಗೆ ಟೇಬಲ್ ಮೇಲೆಯೇ ಕೂಡಿಸಬೇಕು. ಮಣೆ ಮತ್ತು ನೆಲದ ಮೇಲೂ ಕೂಡಿಸುವ ಹಾಗಿಲ್ಲ ಎಂದರು.
READ | ಹುಲಿ- ಸಿಂಹ ಧಾಮದ ಮಹತ್ವದ ಪ್ರಕಟಣೆ
ಶಿವಮೊಗ್ಗದಿಂದ ಯುವನಿಧಿ ಆರಂಭ
ಯುವನಿಧಿ (Yuvanidhi) ಕಾರ್ಯಕ್ರಮವು ಜನವರಿ 12ರಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಲಾಗಿದೆ. ರಾಜ್ಯಮಟ್ಟದ ಸರ್ಕಾರಿ ಕಾರ್ಯಕ್ರಮ ಇದಾಗಿದ್ದು, ಅದೇ ದಿನ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಭಾಗಿ
ಯುವನಿಧಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಭಾಗವಹಿಸಲಿದ್ದಾರೆ. ಶಿವಮೊಗ್ಗದಲ್ಲೇ ಈ ಕಾರ್ಯಕ್ರಮ ಆಯೋಜಿಸಿರುವುದು ಹೆಮ್ಮೆಯ ಸಂಗತಿ ಎಂದರು.
ಶಿವಮೊಗ್ಗ ಗ್ರಾಮಾಂತರ ಶಾಸಕ ಶಾರದಾ ಪೂರ್ಯಾನಾಯ್ಕ್, ಶಿವಮೊಗ್ಗ ನಗರ ಕ್ಷೇತ್ರ ಶಾಸಕ ಎಸ್.ಎನ್.ಚನ್ನಬಸಪ್ಪ, ಪದವೀಧರರ ಸಹಕಾರ ಸಂಘ ಅಧ್ಯಕ್ಷ ಎಸ್.ಪಿ.ದಿನೇಶ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಶಾಸಕ ಆರ್.ಪ್ರಸನ್ನ ಕುಮಾರ್, ಕಲಗೋಡು ರತ್ನಾಕರ್, ವಿಜಯಕುಮಾರ್, ಜಿ.ಡಿ.ಮಂಜುನಾಥ್ ಉಪಸ್ಥಿತರಿದ್ದರು.