ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ತಲೆಯ ಮೇಲೆ ಸಿಮೆಂಟ್ ಇಟ್ಟಿಗೆಯನ್ನು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
ರಾಜೀವ್ ಗಾಂಧಿ ಬಡಾವಣೆ ನಿವಾಸಿ ಪರಶುರಾಮ ಅಲಿಯಾಸ್ ಪರ್ಸಾ ಅಲಿಯಾಸ್ ಚಿಂಗಾರಿ(29) ವಿರುದ್ಧ ಕೊಲೆ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಧೀಶರಾದ ಬಿ.ಆರ್ ಪಲ್ಲವಿ ತೀರ್ಪು ನೀಡಿದರು.
READ | ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸಾವು, ಎರಡು ಪ್ರತ್ಯೇಕ ಪ್ರಕರಣ
ಹಳೆಯ ದ್ವೇಷದ ಹಿನ್ನೆಲೆಯಲ್ಲಿ 2022ರ ಮಾರ್ಚ್ 2ರಂದು ಪರಶುರಾಮನು ಶಿವಮೊಗ್ಗ ನಗರದ ನಿವಾಸಿ ಚಂದ್ರಶೇಖರ್ (30) ಮಧ್ಯರಾತ್ರಿ ಪಿಂಗಾರ ಬಾರ್ ಆ್ಯಂಡ್ ರೆಸ್ಟೋರೆಂಟ್ ಎದುರು ರಸ್ತೆಯಲ್ಲಿ ಸಿಮೆಂಟ್ ಇಟ್ಟಿಗೆಯನ್ನು ಚಂದ್ರಶೇಖರ್ ನ ತಲೆಯ ಮೇಲೆ ಎತ್ತಿ ಹಾಕಿ ಕೊಲೆ ಮಾಡಿರುತ್ತಾನೆಂದು ಮೃತನ ಸಹೋದರ ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿ ಹರೀಶ್ ಕೆ. ಪಟೇಲ್ ತನಿಖೆ ಪೂರೈಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕಿ ಪುಷ್ಪಾ ವಾದ ಮಂಡಿಸಿದ್ದರು.