ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ- ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.34 (ಕಿ.ಮೀ.47/400-500) ನ್ನು ತಾಂತ್ರಿಕವಾಗಿ ಪರಿಶೀಲನೆ ಮಾಡಬೇಕಾಗಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ವಾಹನ ಸಂಚಾರಕ್ಕೆ ಅಡಚಣೆ ಆಗದಂತೆ ಡಿ.5 ರಿಂದ 7 ರವರೆಗೆ ಗೇಟ್ ಮುಚ್ಚಿ ಕೆಳಕಂಡಂತೆ ಪರ್ಯಾಯ ಮಾರ್ಗ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ.
ಆರ್.ಯುಬಿ ಸಂಖ್ಯೆ 60ಎ ಕಿ.ಮೀ. 45/100-200 ರಂತೆ ಶಿವಮೊಗ್ಗದಿಂದ ಭದ್ರಾವತಿಗೆ ಹಾಗೂ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಸಂಚರಿಸುವ ಕಾರು, ಟ್ಯಾಕ್ಸಿ ಹಾಗೂ ಇತರೆ ನಾಲ್ಕು ಚಕ್ರದ ಲಘು ವಾಹನಗಳ ಸಂಚಾರಕ್ಕೆ ಬಿಳಕಿ ಕ್ರಾಸ್- ಲಕ್ಷ್ಮೀಪುರ- ಹೆಬ್ಬಂಡಿ- ವಿದ್ಯಾಧಿರಾಜ ಕಲ್ಯಾಣ ಮಂಟಪ- ಐಟಿಐ ಮಾರ್ಗವಾಗಿ ಭದ್ರಾವತಿ ಬಸ್ ನಿಲ್ದಾಣ ಹಾಗೂ ಕೆಎಸ್ಆರ್ಟಿಸಿ ಬಸ್ಗಳು, ಲಾರಿ, ಟ್ರಕ್, ಗೂಡ್ಸ್ ವಾಹನ ಹಾಗೂ ಭಾರೀ ವಾಹನಗಳು ಅಂಡರ್ ಬ್ರಿಡ್ಜ್-ಉಂಬ್ಳೇಬೈಲ್ ರಸ್ತೆ-ಕೃಷ್ಣಪ್ಪ ಸರ್ಕಲ್ ತಲುಪಿ ರಾಷ್ಟ್ರೀಯ ಹೆದ್ದಾರಿ 69 ರ ಮೂಲಕ ಸಂಚರಿಸುವುದು.
Arecanut shell | ಅಡಿಕೆ ಬೆಳೆಗಾರರಿಗೆ ಶುಭಸುದ್ದಿ, ಶಬ್ದ ನಿರೋಧಕವಾಗಿಯೂ ಅಡಿಕೆ ಸಿಪ್ಪೆ ಬಳಕೆ!