Bhadra water | ಭದ್ರಾ ಮೇಲ್ದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡಲು ಡೇಟ್ ಫಿಕ್ಸ್

Bhadra River Bhadravathi

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಭದ್ರಾ ಮೇಲ್ದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡಲು ದಿನಾಂಕ ನಿಗದಿಯಾಗಿದೆ.
ವಿಶ್ವೇಶ್ವರಯ್ಯ ಜಲನಿಗಮದ ಅಡಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯು ಭದ್ರಾ ಜಲಾಶಯದಿಂದ ಪ್ರಾರಂಭವಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಲಿಂಗದಹಳ್ಳಿ ತರೀಕೆರೆ ಕಸಬಾ ಅಮೃತಾಪುರ ಅಜ್ಜಂಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದ್ದು, ಸರ್ಕಾರದ ನಿರ್ದೇಶನದಂತೆ ಡಿ. 29 ರಂದು ಶಾಂತಿಪುರ ಪಂಪ್‍ಹೌಸ್-1, ಜಂಭದಹಳ್ಳ ಅಕ್ಬೆಡಕ್ಸ್ ತರೀಕೆರೆ ರೈಲು ಸೇತುವೆ ಬೆಟ್ಟತಾವರೆಕೆರೆ ಪಂಪ್‍ಹೌಸ್-2 ಅಜ್ಜಂಪುರ ಸುರಂಗದ ಮೂಲಕ ಹೆಬ್ಬೂರು ಗ್ರಾಮದ ಹತ್ತಿರದ ವೈ-ಜಂಕ್ಷನ್ ಮುಖಾಂತರ ನೀರನ್ನು ಹರಿಸಲಾಗುವುದು.

READ | ಶಾಲೆಯಲ್ಲಿ ಮಕ್ಕಳಿಗೆ ನೆಲದ ಮೇಲೆ ಕೂರಿಸುವಂತಿಲ್ಲ, ಈ ನಿಯಮ ಯಾವಾಗಿಂದ ಜಾರಿ?

ಸಾರ್ವಜನಿಕರಿಗೆ ಎಚ್ಚರ
ಈ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ ತಿರುಗಾಡುವುದು ಜನ ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು ಹಾಗೂ ಇತರೆ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಈ ಸೂಚನೆಗಳನ್ನು ಉಲ್ಲಂಘಿಸುವುದು ನಿಗಮದ ಆಸ್ತಿಯಾದ ನೀರಾವರಿ ಕಾಲುವೆ ಕಟ್ಟಡಗಳನ್ನು ಜಖಂಗೊಳಿಸುವುದು, ಅನಧಿಕೃತವಾಗಿ ಪಂಪ್‍ಸೆಟ್‍ಗಳನ್ನು ಅಳವಡಿಸಿ ನೀರನ್ನು ಎತ್ತುವುದು ನೀರಾವರಿ ಕಾಯ್ದೆಯ ವಿವಿಧ ನಿಯಮಗಳ ಪ್ರಕಾರ ಕಾನೂರು ಬಾಹಿರವಾಗಿದ್ದು, ಇದನ್ನು ಉಲ್ಲಂಘಿಸುವವರನ್ನು ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ವಿಜನಿನಿಯ ಸೂಪರಿಂಟೆಂಡಿಂಗ್ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !!