ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯದಲ್ಲಿ ಖಾಲಿ ಇರುವ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಕುಲಪತಿಗಳ ನೇಮಕ ಶೀಘ್ರವೇ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ (M.C.Sudhakar) ತಿಳಿಸಿದರು.
ಬುಧವಾರ ಶಿವಮೊಗ್ಗಕ್ಕೆ ಭೇಟಿ ನೀಡಿದ ಸಚಿವರು ಮಾಧ್ಯಮದವರೊಂದಿಗೆ ಮಾತನಾಡಿದರು. ಕುಲಪತಿಗಳ ನೇಮಕ ಸಂಬಂದ ಈಗಾಗಲೇ ರಾಜ್ಯಪಾಲರಿಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಆದಷ್ಟು ಬೇಗ ನೇಮಕ ಆಗಲಿದೆ ಎಂದರು.
READ | ನೈಋತ್ಯ ಶಿಕ್ಷಕರ, ಪದವೀಧರ ಕ್ಷೇತ್ರದ ಕರಡು ಪಟ್ಟಿ ಪ್ರಕಟ, ಎಷ್ಟು ಮತದಾರರಿದ್ದಾರೆ? ಇಲ್ಲಿದೆ ಪೂರ್ಣ ಮಾಹಿತಿ
ಕುಲಸಚಿವ ಹುದ್ದೆಗೆ ಕೆಎಎಸ್, ಐಎಎಸ್
ವಿಶ್ವವಿದ್ಯಾಲಯಗಳ ಕುಲಸಚಿವ ಹುದ್ದೆಗೆ ಕೆಎಎಸ್, ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿತ್ತು. ಆದರೆ, ಬಿಜೆಪಿ ಅವಧಿಯಲ್ಲಿ ಪ್ರೊಫೆಸರ್ ಗಳನ್ನು ನೇಮಕ ಮಾಡಿದ್ದರು. ಈಗ ಐಎಎಸ್, ಕೆಎಎಸ್ ಅಧಿಕಾರಿಗಳನ್ನು ಕುಲಸಚಿವರಾಗಿ ನೇಮಕ ಮಾಡುತ್ತೇವೆ ಎಂದರು.
ಭ್ರಷ್ಟಾಚಾರದ ಬಗ್ಗೆ ತನಿಖೆ
ಕುವೆಂಪು ವಿವಿ ಹಿಂದಿನ ಕುಲಪತಿ ಅವಧಿಯಲ್ಲಿ ನಡೆದಿರುವುದಾಗಿ ಆರೋಪಿಸಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆದಿದೆ. ಇದು ರಾಜ್ಯಪಾಲರ ಗಮನದಲ್ಲೂ ಇದೆ. ಹಾಗೂ ಕುವೆಂಪು ವಿವಿಯಲ್ಲಿ ಸ್ಮಾರ್ಟ್ ಕ್ಲಾಸ್ ಹಗರಣ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಸ್ಮಾರ್ಟ್ ಕ್ಲಾಸ್ ಅವ್ಯವಹಾರ ವಿವಿಯ ಆಂತರಿಕ ವಿಚಾರ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ” ಎಂದರು.
ಅತಿಥಿ ಉಪನ್ಯಾಸಕರ ಕಾಯಂಂಗೆ ಕಾನೂನಿನ ತೊಡಕು
ಅತಿಥಿ ಉಪನ್ಯಾಸಕರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅತಿಥಿ ಉಪನ್ಯಾಸಕರ ಸಮಸ್ಯೆ ಕಳೆದ ಎರಡು ದಶಕಗಳಿಂದ ಇದೆ. ಕಾಯಂಗೆ ಸಾಕಷ್ಟು ಕಾನೂನಾತ್ಮಕ ತೊಡಕುಗಳಿವೆ ಎಂದು ತಿಳಿಸಿದರು.