ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಜ. 03 ರಿಂದ ಪ್ರತಿ ಬುಧವಾರ ಬೆಳಗ್ಗೆ 8.30ಕ್ಕೆ ‘ಸ್ವಚ್ಛತೆಯೆಡೆಗೆ ನಮ್ಮ ಪಯಣ’ ಸ್ವಚ್ಛಭಾರತ ಅಭಿಯಾನ ಕುರಿತ ವಿಶೇಷ ಸರಣಿ ಕಾರ್ಯಕ್ರಮ ಪ್ರಸಾರವಾಗಲಿದೆ.
ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯತಿಯ ಪಿ.ಡಿ.ಓಗಳು ಮತ್ತು ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ. ಮೊದಲ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರೊಡನೆ ವಿಶೇಷ ಸಂದರ್ಶನ ಪ್ರಸಾರವಾಗಲಿದೆ.
ಈ ಕಾರ್ಯಕ್ರಮ ಭದ್ರಾವತಿ ಆಕಾಶವಾಣಿ FM103.5 ಹಾಗೂ MW675Khz ನಲ್ಲಿ ಹಾಗೂ ವಿಶ್ವದಾದ್ಯಂತ Prasarabharati ‘newsonair’ App ನಲ್ಲಿ ಭದ್ರಾವತಿ ಕೇಂದ್ರ ಮೂಲಕ ಪ್ರಸಾರ ಸಮಯದಲ್ಲಿ ಕೇಳಬಹುದು ಹಾಗೂ ಪ್ರಸಾರ ನಂತರ ಆಕಾಶವಾಣಿ ಭದ್ರಾವತಿ ಯುಟ್ಯೂಬ್ ಚಾನಲ್ನಲ್ಲಿ ಕೇಳಬಹುದಾಗಿದೆ ಎಂದು ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸಾಗರದಲ್ಲಿ ಹಾಸ್ಟೆಲ್ ಕಟ್ಟಡಕ್ಕೆ ಅರ್ಜಿ ಆಹ್ವಾನ
SHIMOGA: ಸಮಾಜ ಕಲ್ಯಾಣ ಇಲಾಖೆಯು ಸಾಗರ ತಾಲೂಕಿನಲ್ಲಿ ಮಂಜೂರಾತಿ ಸಂಖ್ಯೆಗಿಂತ ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ವಿದ್ಯಾರ್ಥಿ ನಿಲಯಗಳನ್ನು ತೆರೆದು ಈ ವಿದ್ಯಾರ್ಥಿಗಳನ್ನು ಅಲ್ಲಿಗೆ ವರ್ಗಾಯಿಸಬೇಕಾಗಿರುವುದರಿಂದ ಸಾಗರ ತಾಲ್ಲೂಕಿನ ಆಸಕ್ತ ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿಗಳ ವಸತಿ ಸೌಲಭ್ಯಕ್ಕಾಗಿ ಬಾಡಿಗೆ ನೀಡಲು ಮೂಲಭೂತ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಕಟ್ಟಡ ಲಭ್ಯವಿದ್ದಲ್ಲಿ ಅಗತ್ಯ ಮಾಹಿತಿಗಳೊಂದಿಗೆ ಸಾಗರ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :9480843192 ನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಟ್ಟಡದ ನೂತನ ಕೊಠಡಿಗಳ ಉದ್ಘಾಟನೆ
SHIMOGA: ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಪತ್ರಿಕಾ ಭವನದ ಎದುರು ಶಿವಮೊಗ್ಗ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದದಲ್ಲಿ 2022-23ನೇ ಸಾಲಿನ ಶಾಸಕರ ಅನುದಾನದಲ್ಲಿ ನಿರ್ಮಿಸಿರುವ ನೂತನ ಕೊಠಡಿಗಳ ಉದ್ಘಾಟನೆ ಸಮಾರಂಭವನ್ನು ಜ.05 ರಂದು ಬೆಳಗ್ಗೆ 11ಕ್ಕೆ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಿವಮೊಗ್ಗ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಡಿ.ಎಂ. ಚಂದ್ರಶೇಖರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ, ಜಿ.ಪಂ. ಮಾಜಿ ಸದಸ್ಯ ಕೆ.ಈ.ಕಾಂತೇಶ್ ಭಾಗವಹಿಸಲಿದ್ದಾರೆ.
ಅಪರಿಚಿತ ಗಂಡಸಿನ ಶವ ಪತ್ತೆ
SHIMOGA: ನಗರದ ವೀರಭದ್ರ ಟಾಕೀಸ್ ಬಳಿ ನಿಲ್ಲಿಸಿದ್ದ ಈಚರ್ ಲಾರಿಯಲ್ಲಿ ಸುಮಾರು 30-40 ವರ್ಷ ವಯಸ್ಸಿನ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ದೊರಕಿದ್ದು, ಹೆಸರು, ವಿಳಾಸ, ವಾರಸ್ಸುದಾರರ ಮಾಹಿತಿ ದೊರಕಿರುವುದಿಲ್ಲ.
ಈ ಚಹರೆ ಸುಮಾರು 5.3 ಅಡಿ ಎತ್ತರ, ಸಾಧಾರಣ ಮೈಕಟ್ಟು, ಬಾಕಿಯಂತೆ ಪೂರ್ಣ ದೇಹ ಕೊಳೆತಿದ್ದು, ಚಹರೆ, ಮುಖ ಗುರುತಾಗುವುದಿಲ್ಲ. ಮೈಮೇಲೆ ಮಾಸಲು ಬಣ್ಣದ ಟೀ ಶರ್ಟ್, ಕಪ್ಪು ಪ್ಯಾಂಟ್ ಧರಿಸಿರುತ್ತಾರೆ.
ಈ ಅಪರಿಚಿತ ವ್ಯಕ್ತಿಯ ವಾರಸ್ಸುದಾರರು ಯಾರಾದರೂ ಇದ್ದಲ್ಲಿ ಕೋಟೆ ಪೊಲೀಸ್ ಠಾಣೆ ದೂ.ಸಂ.: 08182-261415 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಸಬ್ ಇನ್ಸ್ ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Property parade | 2023ರಲ್ಲಿ ಶಿವಮೊಗ್ಗದಲ್ಲಿ ದಾಖಲಾದ ಕೇಸ್ ಗಳೆಷ್ಟು? ಕೋಟಿ ಕೋಟಿ ಕಳ್ಳತನ ಪ್ರಕರಣ ಬೇಧಿಸಿದ ಖಾಕಿ