ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: 2022ರಿಂದ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿರುವ ಡಾ.ಆರ್.ಸೆಲ್ವಮಣಿ ಅವರು ವರ್ಗಾವಣೆಗೊಂಡಿದ್ದಾರೆ. ತೆರವಾದ ಸ್ಥಾನಕ್ಕೆ ಗುರುದತ್ತ ಹೆಗಡೆ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಡಾ.ಆರ್.ಸೆಲ್ವಮಣಿ ಅವರು ಬೆಂಗಳೂರಿನ ಸೆಂಟರ್ ಫಾರ್ ಇ ಗವರ್ನೆನ್ಸ್ನ ಸಿಇಒ ಆಗಿ ನೇಮಿಸಿದ್ದು, 2022ರ ಜನವರಿಯಲ್ಲಿ ಶಿವಮೊಗ್ಗ ಡಿಸಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಜಿಲ್ಲೆಯಲ್ಲಿ ಹಲವು ಕೆಲಸಗಳನ್ನು ಮಾಡಿದ್ದರು. ಗುರುದತ್ತ ಹೆಗಡೆ ಧಾರವಾಡದಲ್ಲಿ ಡಿಸಿಯಾಗಿದ್ದರು.
READ | ಶಿವಮೊಗ್ಗ ಡಿಸಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಆರ್.ಸೆಲ್ವಮಣಿ