ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಇಂದು ಶಿವಮೊಗ್ಗ ಜಿಲ್ಲೆಗೆ ಮೂವರು ಸಚಿವರು ಆಗಮಿಸಲಿದ್ದಾರೆ. ಅವರು ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
READ | ಅತಿಥಿ ಉಪನ್ಯಾಸರ ಐದು ಪ್ರಮುಖ ಬೇಡಿಕೆಗಳ ಬಿಡುಗಡೆ
ಯುವನಿಧಿ ಪೂರ್ವಭಾವಿ ಸಭೆಯಲ್ಲಿ ಯಾರೆಲ್ಲ ಭಾಗಿ?
ನಗರದ ಫ್ರೀಡಂ ಪಾರ್ಕ್ ನಲ್ಲಿ ಜ.12ರಂದು ಕಾಂಗ್ರೆಸ್ ಐದನೇ ಗ್ಯಾರಂಟಿ ಯೋಜನೆ ‘ಯುವನಿಧಿ’ಗೆ ಶಿವಮೊಗ್ಗದಿಂದ ಚಾಲನೆ ನೀಡುತ್ತಿದ್ದು, ಇದರ ಪೂರ್ವಭಾವಿ ಸಭೆ ಮಾಡಲಾಗಿತ್ತಿದೆ. ಈ ಮಹತ್ವದ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್.ಪಾಟೀಲ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೌಶಲ್ಯಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ಆಯುಕ್ತರಾದ ಡಾ. ಆರ್.ರಾಗಪ್ರಿಯಾ ಪಾಲ್ಗೊಳ್ಳದ್ದಾರೆ.