ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಇಲ್ಲಿನ ಗೋಪಾಲಗೌಡ ಬಡಾವಣೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಕರಡಿ ಕಾಣಿಸಿಕೊಂಡಿದ್ದು, ವಾಕಿಂಗ್ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿದೆ.
ಗೋಪಾಳಗೌಡ ಬಡಾವಣೆಯ ಎಫ್ ಬ್ಲಾಕ್ ನಲ್ಲಿರುವ ಡಿವಿಜಿ ಉದ್ಯಾನ ಬಳಿ ಕರಡಿ ಕಾಣಿಸಿಕೊಂಡಿದ್ದು, ವಾಕಿಂಗ್ ಮಾಡುತ್ತಿದ್ದ ಸ್ಥಳೀಯ ತುಕಾರಾಂ ಶೆಟ್ಟಿ ಎಂಬಾತನ ಮೇಲೆ ದಾಳಿ ಮಾಡಿದ್ದು ಹೊಟ್ಟೆ ಮೇಲೆ ಪರಚಿದೆ.
READ | ಕೈಕೊಟ್ಟ ಎಲೆಕ್ಟ್ರಿಕ್ ಬೈಕ್, ಕಂಪನಿಗೆ ಬಿತ್ತು ಭಾರಿ ದಂಡ
ಕರಡಿಯನ್ನು ನಾಯಿಗಳು ಅಟ್ಟಿಸಿಕೊಂಡು ಬಂದಿದ್ದು, ತುಕಾರಾಂ ಅವರ ಮೇಲೆ ದಾಳಿ ನಡೆಸಿ ಓಡಿ ಹೋಗಿದೆ. ಈ ಕುರಿತು ಮಾಹಿತಿ ಲಭ್ಯವಾದ ತಕ್ಷಣ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಜನವಸತಿ ಪ್ರದೇಶದಲ್ಲಿ ಕರಡಿ ಕಾಣಿಸಿಕೊಂಡಿದ್ದರಿಂದ ಜನರು ಆತಂಕದಲ್ಲಿದ್ದಾರೆ.