ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಇನ್ನು ಮುಂದೆ ವಾರದ ನಾಲ್ಕು ದಿನಗಳ ಕಾಲ ಮಕ್ಕಳಿಗೆ ಪೌಷ್ಟಿಕ ಆಹಾರ ರಾಗಿ ಮಾಲ್ಟ್ (Ragi Malt) ನೀಡುವ ಕಾರ್ಯಕ್ರಮಕ್ಕೆ ಫೆ.22ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ. (Karnataka chief minister Siddaramaiah) ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
READ | ಎರಡು ವರ್ಷ ಕಟ್ಟಿದ ಪಾಲಿಸಿ ಹಣ ಗುಳುಂ, ವಿಮಾ ಕಂಪನಿಗೆ ಚಾಟಿ ಬೀಸಿದ ಗ್ರಾಹಕರ ನ್ಯಾಯಾಲಯ, ಏನಿದು ಪ್ರಕರಣ?
ಅಲ್ಲಮಪ್ರಭು ಮೈದಾನ (freedom park)ದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಐದು ದಿನಗಳ ಕಾಲ ಪೌಷ್ಟಿಕ ಆಹಾರ ಹಾಲು ಮತ್ತು ಎರಡು ದಿನಗಳ ಕಾಲ ಮೊಟ್ಟೆಯನ್ನು ನೀಡಲಾಗುತ್ತಿತ್ತು. ಇನ್ಮುಂದೆ ರಾಗಿ ಮಾಲ್ಟ್ ನೀಡಲಾಗುವುದು. ರಾಜ್ಯದ 59 ಲಕ್ಷ ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.
ಪ್ರಸ್ತುತ ಆಡಳಿತಾರೂಢ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುವ ಸದುದ್ದೇಶದಿಂದ ಕಳೆದ ಸಾಲಿನಲ್ಲಿ ಶಿಕ್ಷಣ ಇಲಾಖೆಗೆ ನಿಗದಿಗೊಳಿಸಿದ ₹37 ಸಾವಿರ ಕೋಟಿ ಅನುದಾನವನ್ನು ಪ್ರಸಕ್ತ ಸಾಲಿಗೆ ₹44,000 ಕೋಟಿಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ವಚನದ ಸಾಲುಗಳ ಅಳವಡಿಕೆ
ಫೆ.24ರಂದು ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಯುವ ಜಿಲ್ಲಾಮಟ್ಟದ ಗ್ಯಾರಂಟಿ ಸಮಾವೇಶದ ದಿನವೇ ಫ್ರೀಡಂ ಪಾರ್ಕಿನ ಹೊರಾಂಗಣದ ಬಿತ್ತಿಯಲ್ಲಿ ಅಲ್ಲಮಪ್ರಭುಗಳ ವಚನದ ಸಾಲುಗಳನ್ನು ಪ್ರಕಟಿಸಲಾಗುವುದು ಎಂದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಜಿಲ್ಲಾ ಪೊಲೀಸ್ ಅಧಿಕಾರಿ ಜಿ.ಕೆ ಮಿಥುನ್ ಕುಮಾರ್ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ರಾಜಕೀಯ ಮುಖಂಡರು ಉಪಸ್ಥಿತರಿದ್ದರು.