ಸುದ್ದಿ ಕಣಜ.ಕಾಂ ಶಿಕಾರಿಪುರ
SHIKARIPURA: ದೊಡ್ಡಪೇಟೆ ಮುಖ್ಯರಸ್ತೆಯ ವಿಠ್ಠಲ ದೇಗುಲ ಬಳಿ ಸುಶೀಲ್ (23) ಎಂಬಾತನಿಗೆ ಚಾಕುವಿನಿಂದ ಚುಚ್ಚಿರುವ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಘಟನೆಯ ತನಿಖೆಗೆ ಮೂರು ತಂಡಗಳನ್ನು ರಚಿಸಲಾಗಿದೆ.
READ | ಶಿವಮೊಗ್ಗದ ಹಲವೆಡೆ ಪೊಲೀಸರ ಏಕಾಏಕಿ ದಾಳಿ, 33 ಪ್ರಕರಣ ದಾಖಲು
ಅಡ್ಡಾದಿಡ್ಡಿ ಬೈಸಿಕಲ್ ಚಾಲನೆ, ಪ್ರಶ್ನಿಸಿದ್ದಕ್ಕೆ ಚಾಕು ಇರಿತ
ಬೈಕ್ ಅನ್ನು ಅಡ್ಡಾದಿಡ್ಡಿ ಚಲಾಯಿಸಿಕೊಂಡು ಬರುತ್ತಿದ್ದ ವ್ಯಕ್ತಿಯೊಬ್ಬನಿಗೆ ಖಾಸಗಿ ಕಾಲೇಜಿನಲಗಲಿ ಕಂಒ್ಯೂಟರ್ ಆಪರೇಟರ್ ಆಗಿ ಕಾರ್ಯನಿರ್ವಹಿಸುವ ಸುಶೀಲ್ ಪ್ರಶ್ನಿಸಿದ್ದಾನೆ. ಈ ವಿಚಾರವಾಗಿ ಚಾಕು ಇರಿಯಲಾಗಿದೆ. ಗಾಯಾಳು ಚೇತರಿಸಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು?
ಘಟನೆಯ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ಮಾಧ್ಯಮಗಳಿಗೆ ವಾಟ್ಸಾಪ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಅಡ್ಡಾದಿಡ್ಡಿ ಬೈಸಿಕಲ್ ಓಡಿಸುತ್ತಿದ್ದವನಿಗೆ ಸುಶೀಲ್ ಸರಿಯಾಗಿ ವಾಹನ ಚಲಾಯಿಸುವಂತೆ ತಿಳಿಸಿದ್ದಾರೆ. ಇದರಿಂದ ಆತ ಕುಪಿತಗೊಂಡು ಸ್ನೇಹಿತರನ್ನು ಕರೆಸಿಕೊಂಡಿದ್ದು, ಚಾಕು ಇರಿಯಲಾಗಿದೆ. ಪ್ರಕರಣದ ತನಿಖೆಗೆ ಮೂರು ತಂಡಗಳನ್ನು ರಚಿಸಲಾಗಿದೆ. ಇಬ್ಬರನ್ನು ಈಗಾಗಲೇ ವಶಪಡಿಸಿಕೊಳ್ಳಲಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.