ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ (Malnad Area Development Authority) ಕಚೇರಿ ಆವರಣದಲ್ಲಿ ನೂತನ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡರ ಪದಗ್ರಹಣ ಸಮಾರಂಭ ಸೋಮವಾರ ಜರುಗಿತು.
ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, “ಮಂಡಳಿಯು 13 ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದೆ. 65 ಕ್ಕೂ ಹೆಚ್ಚು ಶಾಸಕರು, ಸಂಸದರು, ಅಧಿಕಾರಿಗಳನ್ನೊಂಡಿದ್ದು ಎಲ್ಲರ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯವನ್ನು ಮಾಡುತ್ತೇನೆ” ಎಂದರು.
READ | ಕೈಕೊಟ್ಟ ಎಲೆಕ್ಟ್ರಿಕ್ ಬೈಕ್, ಕಂಪನಿಗೆ ಬಿತ್ತು ದಂಡ
ಆರ್.ಎಂ.ಎಂ. ಹೇಳಿದ್ದೇನು?
- ಅಧ್ಯಕ್ಷರ ಗಾದಿ ಹೆಸರಿಗೆ ಮಾತ್ರವಲ್ಲ. ಇದನ್ನು ನಿಭಾಯಿಸುವುದು ಸುಲಭದ ಕೆಲಸವಲ್ಲ. ಹತ್ತಾರು ಎಂಎಲ್ಎ ಗಳು, ಸಂಸದರು ಎಲ್ಲರಿಗೂ ಅನುದಾನ ನೀಡಿ ಅಭಿವೃದ್ಧಿ ಮಾಡಬೇಕಾಗಿದೆ. ಆದರೆ ಪ್ರಸ್ತುತ ಬರಗಾಲದ ಸಂದರ್ಭದಲ್ಲಿ ಜನ ಮೂಲಭೂತ ಸೌಲಭ್ಯಗಳ ಕುರಿತು ಹೆಚ್ಚಿನ ಗಮನ ನೀಡಬೇಕಾಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರ ಸಹಕಾರದಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನವನ್ನು ತಂದು ಮಲೆನಾಡಿನ ಸಮಸ್ಯೆಗಳ ಕುರಿತು ಪರಿಶೀಲಿಸಿ ಕೆಲಸವನ್ನು ಮಾಡಬೇಕಾಗಿದೆ. ಎಲ್ಲರ ಸಹಕಾರ ಅಗತ್ಯ.
- ಸರ್ಕಾರದಲ್ಲಿ ಆಗದೇ ಇರುವ ಕೆಲಸಗಳು ಮಲೆನಾಡು ಅಭಿವೃದ್ಧಿ ಮಂಡಳಿಯಿಂದ ಮಾಡಲು ಅವಕಾಶ ಇದೆ. ಮಲೆನಾಡಿನ ಅನೇಕ ಸಮಸ್ಯೆಗಳು ಮತ್ತು ತುರ್ತು ಸಂದರ್ಭದ ಕೆಲಸಗಳನ್ನು ಮಾಡಬಹುದು ಮುಂದಿನ ದಿನಗಳಲ್ಲಿ ಮಲೆನಾಡು ಪ್ರದೇಶದ ಪ್ರತಿ ಭಾಗದಲ್ಲಿಯೂ ಉತ್ತಮವಾದ ಕೆಲಸಗಳನ್ನು ಮಾಡಲಿದ್ದೇವೆ.
ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲ ಕೃಷ್ಣ, ಚನ್ನಗಿರಿಯ ಶಾಸಕ ಬಸವರಾಜ್ ಶಿವಗಂಗಾ, ಸೂಡಾ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಮಾಜಿ ಸಂಸದ ಆಯನೂರು ಮಂಜುನಾಥ, ಮುಖಂಡರಾದ ಎಂ.ಶ್ರೀಕಾಂತ್, ಮರಿಯಪ್ಪ, ಬಲ್ಕಿಶ್ ಬಾನು, ಗೋಣಿ ಮಾಲತೇಶ್, ಗೀತಾ ರಮೇಶ್, ಮೈಲಾರಪ್ಪ ಉಪಸ್ಥಿತರಿದ್ದರು.