ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಲೋಕಸಭಾ ಚುನಾವಣೆಯ ನೀತಿಸಂಹಿತೆ lokasabha election model code of conduct) ಜಾರಿಯಲ್ಲಿದ್ದು, ಈ ವೇಳೆ ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ರಾಜಕೀಯ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕೆ.ಎಸ್.ಈಶ್ವರಪ್ಪ ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ.
READ | ಓಸಿ ಅಡ್ಡಾಗಳಿಂದ ಲಂಚ ಕೇಳಿದ್ದ ಪೊಲೀಸ್ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಬಲೆಗೆ
ಎಫ್ಐಆರ್ ದಾಖಲಾಗಲು ಕಾರಣವೇನು?
ಏ.5 ರಂದು ತೀರ್ಥಹಳ್ಳಿ ತಾಲೂಕು ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನ ಒಂದರಲ್ಲಿ ಪೂಜಾ ಕಾರ್ಯಕ್ರಮ ನೆರವೇರಿಸಿ, ಅಲ್ಲೇ ಹತ್ತಿರದಲ್ಲೇ ಅರ್ಚಕರ ಮನೆಗೆ ಹೋಗಿ, ಅಲ್ಲಿ ಅವರ ಮನೆಯ ಅಂಗಳದಲ್ಲಿ ಸುಮಾರು 50 ರಿಂದ 60 ಜನರನ್ನು ಸೇರಿಸಿಕೊಂಡು 50 ಕುರ್ಚಿಗಳು ಹಾಗೂ ಹ್ಯಾಂಡ್ ಮೈಕ್ ಒಳಗೊಂಡಂತೆ ಸಣ್ಣ ವೇದಿಕೆ ರೀತಿಯಲ್ಲಿ ಸಭೆ ನಡೆಸಿ ಅವರು ರಾಜಕೀಯ ಪ್ರೇರಿತ ಭಾಷಣವನ್ನು ಮಾಡಿರುತ್ತಾರೆ. ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿಯನ್ನು ಈ ಕಾರ್ಯಕ್ರಮ ನಡೆಸಲು ಪಡೆದಿರುವುದಿಲ್ಲ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಅಸಂಜ್ಞೆಯ ಅಪರಾಧ ಪ್ರಕರಣವಾದ್ದರಿಂದ ನ್ಯಾಯಾಲಯದ ಅನುಮತಿ ಪಡೆದು ಕೆ.ಎಸ್. ಈಶ್ವರಪ್ಪ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.