ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ದೆಹಲಿಗೆ ಅಮಿತ್ ಶಾ ಅವರನ್ನು ಭೇಟಿ ಆಗಲು ಹೋಗಿದ್ದ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗಕ್ಕೆ ವಾಪಸ್ ಬಂದಿದ್ದಾರೆ. ಬಂದಿದ್ದೇ ತುರ್ತು ಮಾಧ್ಯಮಗೋಷ್ಠಿ ಮಾಡಿದರು.
READ | ಈಜು ಕಲಿಯಬೇಕೇ? ಇಲ್ಲಿದೆ ಸುವರ್ಣ ಅವಕಾಶ, ಏನೆಲ್ಲ ತರಬೇತಿ ನೀಡಲಾಗುತ್ತಿದೆ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
ಭೇಟಿ ಅವಶ್ಯಕತೆ ಇಲ್ಲ ಎಂದ ಅಮಿತ್ ಶಾ!
ಅಮಿಶ್ ಶಾ ದಿಲ್ಲಿಗೆ ಬರಲು ಹೇಳಿದ್ದರು ಅಷ್ಟು ದೊಡ್ಡವರು ಕರೆದಾಗ ಗೌರವ ಕೊಟ್ಟು ದೆಹಲಿಗೆ ಹೋದೆ. ರಾಜೇಶ್ ಅವರ ಮನೆಗೆ ತೆರಳಲು ಸೂಚಿಸಿದ್ದರು ನಾನು ದೆಹಲಿ ತಲುಪಿ ಅಮಿತ್ ಶಾ ಮನೆಗೆ ಕರೆ ಮಾಡಿದ್ದೆ. ಫೋನ್ ಮೂಲಕ ಭೇಟಿ ಅವಶ್ಯಕತೆ ಇಲ್ಲ ಎಂದು ತಿಳಿಸಿದರು. ವಾಪಸು ಮನೆಗೆ ಹೋಗಲು ತಿಳಿಸಿದ್ದಾರೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು.
ಸ್ಪರ್ಧಿಸುವ ನೇರ ಸೂಚನೆ ಸಿಕ್ಕಿದೆ
ಅಮಿತ್ ಶಾ ಅವರು ಭೇಟಿ ಆಗುವ ಅಗತ್ಯವಿಲ್ಲ ಎಂದಿದ್ದು, ಈ ಮೂಲಕ ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡಿ ಗೆಲ್ಲುವ ಸೂಚನೆ ಸಿಕ್ಕಂತಾಗಿದೆ. ಕುಟುಂಬ ರಾಜಕಾರಣ ಕಾಂಗ್ರೆಸ್ ತರಹ ಕರ್ನಾಟಕದ ಬಿಜೆಪಿ ಪಕ್ಷದಲ್ಲಿದೆ ಮತ್ತು ಹಿಂದುತ್ವ ಪರವಾದ ನಾಯಕರನ್ನು ಮೂಲೆಗುಂಪು ಮಾಡಿದ್ದಾರೆ ನನ್ನ ಹಾಗೆ ಅನೇಕರಿಗೆ ಅನ್ಯಾಯವಾಗಿದೆ. ಈ ಎಲ್ಲ ಪ್ರಶ್ನೆ ಗಳಿಗೆ ಅವರ ಬಳಿ ಉತ್ತರ ಇಲ್ಲ. ಹಾಗಾಗಿ ಭೇಟಿಯಾಗದೆ ಸ್ಪರ್ಧೆ ಮಾಡಲು ಸೂಚನೆ ಸಿಕ್ಕಂತಾಗಿದೆ ಎಂದು ಹೇಳಿದರು.
ಸ್ಪರ್ಧಿಸಿ ಗೆಲ್ಲುವೆ, ಮೋದಿ ಪರ ಕೈ ಎತ್ತುವೆ
ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ದೆಹಲಿಗೆ ತೆರಳಿ ಮೋದಿ ಪರವಾಗಿ ಕೈ ಎತ್ತುತ್ತೇನೆ. ನನ್ನನ್ನು ಭೇಟಿಯಾಗದೆ ಅವರು ತೆಗೆದುಕೊಂಡ ತೀರ್ಮಾನ ರಾಜಕೀಯ ಚಾಣಾಕ್ಷನ ತೀರ್ಮಾನ ಸ್ವಾಗತಿಸುತ್ತೇನೆ. ಈ ಮೂಲಕ ನನಗೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆಲ್ಲುವ ಸೂಚನೆ ಸಿಕ್ಕಂತಾಗಿದೆ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ವಿಜಯೇಂದ್ರಗೆ ಸೋಲಿನ ಭೀತಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯದ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಅವರಿಗೆ ಸೋಲಿನ ಭೀತಿ ಶುರುವಾಗಿದೆ. ಗೊಂದಲ ಸೃಷ್ಟಿಸುವ ಹೇಳಿಕೆ ನೀಡಿದರೆ ವಿಜಯೇಂದ್ರಗೆ ಬೇರೆಯದೇ ಭಾಷೆಯಲ್ಲಿ ಉತ್ತರಿಸಬೇಕಾಗುತ್ತದೆ. ನಾನು ಗೀತಾ ಶಿವರಾಜ್ ಕುಮಾರ್ ಬಗ್ಗೆ ಹಗುರವಾಗಿ ಮಾತನಾಡುತ್ತಿಲ್ಲ. ಮಧು ಬಂಗಾರಪ್ಪ ಮನಸ್ಸು ಮುಟ್ಟಿಕೊಂಡು ಹೇಳಲಿ ಯಡಿಯೂರಪ್ಪ ಹೊಂದಾಣಿಕೆ ರಾಜಕಾರಣ ಮಾಡುತ್ತಿಲ್ಲ ಎಂದು ಎಂದರು.
ಗೀತಾ ಶಿವರಾಜ್ ಕುಮಾರ್ ಸೋದರಿ ಸಮಾನ ನಾನು ವೈಯಕ್ತಿಕವಾಗಿ ಟೀಕೆ ಮಾಡುತ್ತಿಲ್ಲ ರಾಜಕೀಯವಾಗಿ ಡಮ್ಮಿ ಕ್ಯಾಂಡಿಡೇಟ್ ಎಂದು ಹೇಳಿದ್ದೇನೆ ಎಂದು ಹೇಳಿದರು.