ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಬಾಪೂಜಿನಗರದ ಆದಿಪರಾಶಕ್ತಿ ದೇವಸ್ಥಾನ ಸಮೀಪ ವ್ಯಕ್ತಿಯೊಬ್ಬನಿಗೆ ಬ್ಯಾಟ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಸಂಭವಿಸಿದೆ.
ಕೌಟುಂಬಿಕ ವಿಚಾರವಾಗಿ ಹಲ್ಲೆ ಮಾಡಿರುವುದಾಗಿ ತಿಳಿದುಬಂದಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, “ಮೃತನನ್ನು ಸುರೇಶ್ ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣಕ್ಕೆ ಕೊಲೆ ನಡೆಸಿದೆ. ಈ ಕುರಿತು ತನಿಖೆ ನಡೆದಿದೆ” ಎಂದು ತಿಳಿಸಿದ್ದಾರೆ.