ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರವನ್ನೇ ಬೆಚ್ಚಿಬೀಳಿಸಿದ್ದ ಲಷ್ಕರ್ ಮೊಹಲ್ಲಾ ಡಬಲ್ ಮರ್ಡರ್ ಕೇಸ್ ನಲ್ಲಿ ತೀವ್ರ ಗಾಯಗೊಂಡಿದ್ದ ರೌಡಿಶೀಟರ್ ಯಾಸಿನ್ ಖುರೇಷಿ ಸಾವಿಗೀಡಾಗಿದ್ದಾರೆ.
ಬುಧವಾರ ಸಂಜೆ ಲಷ್ಕರ್ ಮೊಹಲ್ಲಾದಲ್ಲಿ ನಡೆದ ಗ್ಯಾಂಗ್ ವಾರ್ ನಲ್ಲಿ ಖುರೇಷಿ ಮೇಲೆ ತೀವ್ರ ಹಲ್ಲೆ ಮಾಡಲಾಗಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆತ ಗುರುವಾರ ಸಂಜೆ ಮೃತಪಟ್ಟಿದ್ದಾರೆ.
READ | ಶಿವಮೊಗ್ಗದ ಸಾರ್ವಜನಿಕ ಸ್ಥಳದಲ್ಲೇ ನಡೀತು ಡಬಲ್ ಮರ್ಡರ್, ಎಸ್.ಪಿ ಹೇಳಿದ್ದೇನು?
18 ಜನರ ಬಂಧನ, ಯಾವೆಲ್ಲ ಕೇಸ್ ದಾಖಲು?
ಪ್ರಕರಣ ಸಂಬಂಧ ಪೊಲೀಸರು 18 ಜನರನ್ನು ಬಂಧಿಸಿದ್ದು, ಅವರ ವಿರುದ್ಧ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಹತ್ತು ಜನ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302 ಹಾಗೂ ಎಂಟು ಜನರ ವಿರುದ್ಧ 307 ಅಡಿ ಪ್ರಕರಣ ದಾಖಲಿಸಲಾಗಿದೆ.
ಖುರೇಷಿ ಮೇಲೆ ಅಟ್ಯಾಕ್ ಗೆ ಸ್ಕೆಚ್
ದಾಳಿ ಮಾಡುವ ಸ್ಕೆಚ್ ಹಾಕಿಕೊಂಡು ಬಂದಿದ್ದ ಆದಿಲ್ ಸಹಚರರು ಲಷ್ಕರ್ ಮೊಹಲ್ಲಾ ನಿವಾಸಿ ರೌಡಿಶೀಟರ್ ಯಾಸಿನ್ ಖುರೇಷಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಖುರೇಷಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಗ್ಯಾಂಗ್ ವಾರ್ ನಲ್ಲಿ ಖುರೇಷಿ ಕಡೆಯವರು ಆದಿಲ್ ಸಹಚರರಾದ ಸೊಹೇಲ್ ಅಲಿಯಾಸ್ ಸೇಬು (32), ಗೌಸ್ (30) ಎಂಬುವವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಸೈಕಲ್ ಮತ್ತು ಚಪ್ಪಡಿ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.