Gunshot | ಪೊಲೀಸರ ಮೇಲೆಯೇ ಅಟ್ಯಾಕ್ ಮಾಡಲು ಮುಂದಾದ ರೌಡಿ ಕಾಲಿಗೆ ಗುಂಡೇಟು, ಖಾಕಿ ಖಡಕ್ ವಾರ್ನಿಂಗ್

Shoaib

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಇತ್ತೀಚೆಗೆ ಲಷ್ಕರ್ ಮೊಹಲ್ಲಾದಲ್ಲಿ ನಡೆದ ಗ್ಯಾಂಗ್ ಪ್ರಕರಣದ ಆರೋಪಿಯ ಕಾಲಿಗೆ ಗುಂಡು ಹಾರಿಸುವ ಮೂಲಕ ಜಿಲ್ಲಾ ಪೊಲೀಸರು ಪುಡಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ತಾಲೂಕಿನ ಬೀರನಕೆರೆ ಅರಣ್ಯ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಶೋಯೆಬ್ ಅಲಿಯಾಸ್ ಅಂಡ ಎಂಬಾತನ ಮೇಲೆ ಗುಂಡು ಹಾರಿಸಲಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

READ | ಗ್ಯಾಂಗ್ ವಾರ್ ನಲ್ಲಿ ಗಾಯಗೊಂಡಿದ್ದ ಖುರೇಷಿ ಸಾವು, 18 ಜನ ಅರೆಸ್ಟ್, ಯಾವೆಲ್ಲ‌ ಕೇಸ್ ಹಾಕಲಾಗಿದೆ?

ಬಂಧಿಸಲು ಹೋದಾಗ ನಡೀತು ಘಟನೆ
ಶೋಯೆಬ್ ಬೀರನಕೆರೆಯಲ್ಲಿ ಇರುಗವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್.ಐ ಕುಮಾರ್ ಮತ್ತು ಸಿಬ್ಬಂದಿ ಅಣ್ಣಪ್ಪ ಕಾರ್ಯಾಚರಣೆ ಕೈಗೊಂಡಿದ್ದಾರೆ. ಆಗ ಶೋಯೆಬ್ ಮಾರಕಾಸ್ತ್ರದಿಂದ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಕುಮಾರ್ ಗುಂಡು ಹಾರಿಸಿದ್ದಾರೆ.
ಶೋಯೆಬ್ ವಿರುದ್ಧ ಇವೆ ಕೇಸ್
ರೌಡಿಶೀಟರ್ ಶೋಯೆಬ್ ವಿರುದ್ಧ ವಿವಿಧ ಠಾಣೆಗಳಲ್ಲಿ ಐದು ಪ್ರಕರಣಗಳಿವೆ. ಅದರಲ್ಲಿ ಎರಡು ಕೊಲೆ ಯತ್ನ ಪ್ರಕರಣಗಳಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಗ್ಯಾಂಗ್ ವಾರ್ ನಲ್ಲಿ ಮೂವರು ಮೃತಪಟ್ಟಿದ್ದರು. ಈ ಪ್ರಕರಣ ಸಂಬಂಧ ಈಗಾಗಲೇ ಕೋಟೆ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದಾರೆ.

error: Content is protected !!