Lokayukta | ಸಾಗರ ಎಆರ್‌ಟಿಓ ಕಚೇರಿಗೆ ಲೋಕಾಯುಕ್ತ ಅನಿರೀಕ್ಷಿತ ಭೇಟಿ

Lokayukta raid sagar

 

 

ಸುದ್ದಿ ಕಣಜ.ಕಾಂ ಸಾಗರ
SAGARA: ಸಾಗರ ಎಆರ್.ಟಿ.ಓ ಕಚೇರಿಗೆ ಲೋಕಾಯುಕ್ತರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಕಂಡುಬAದ ನ್ಯೂನ್ಯತೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಲಾಯಿತು.
ಸಿಬ್ಬಂದಿ ಹಾಜರಾತಿ ಪುಸ್ತಕ, ಕ್ಯಾಷ್ ಡಿಕ್ಲರೇಷನ್, ಚಲನವಲನ ವಹಿ, ದಸ್ತಾವೇಜುಗಳ ರಿಜಿಸ್ಟರ್‌ಗಳ, ಸಾರಥಿ ಮತ್ತು ವಾಹನ ತಂತ್ರಾಂಶವನ್ನು ಪರಿಶೀಲಿಸಿ ಎಲ್.ಎಲ್.ಆರ್., ಡಿ.ಎಲ್., ಎಫ್.ಸಿ., ಹೊಸ ವಾಹನಗಳ ನೊಂದಣಿ, ವಾಹನಗಳ ವರ್ಗಾವಣೆ, ದಂಡವಸೂಲಿ, ಡಿಜಿಟಲ್ ಕಾರ್ಡ್ ಪ್ರಿಂಟಿಂಗ್, ಆರ್.ಸಿ. ಕಾರ್ಡ್ ವಿತರಣೆ ಮತ್ತು ಸಕಾಲ ಯೋಜನೆಯಡಿಯಲ್ಲಿ ಬಾಕಿ ಇರುವ ಅರ್ಜಿಗಳಿಗೆ ಸಂಬಂಧಪಟ್ಟ ದಾಖಲಾತಿಗಳನ್ನು ಪರಿಶೀಲಿಸಲಾಯಿತು.

READ | ಶಿವಮೊಗ್ಗದಲ್ಲಿ ನಡೆಯಲಿದೆ ಪಿಜಿ ಸಿಇಟಿ ಪರೀಕ್ಷೆ, ಇಲ್ಲಿದೆ ವೇಳಾಪಟ್ಟಿ

ಪರಿಶೀಲನಾ ಸಮಯದಲ್ಲಿ ಕಂಡು ಬಂದ ನ್ಯೂನ್ಯತೆಗಳ ಬಗ್ಗೆ ಎ.ಆರ್.ಟಿ.ಓಗೆ ಸ್ಥಳದಲ್ಲಿಯೇ ಸೂಚನೆಗಳನ್ನು ನೀಡಲಾಯಿತು. ನ್ಯೂನ್ಯತೆಗಳ ಬಗ್ಗೆ ಕ್ರಮವಹಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಸೂಚನೆಗಳನ್ನು ನೀಡಲಾಯಿತು.
ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಮಂಜುನಾಥ್ ಚೌದರಿ ಅವರು ಪೊಲೀಸ್ ನಿರೀಕ್ಷಕ ವೀರಬಸಪ್ಪ ಎಲ್.ಕುಸಲಾಪುರ, ಸಿಬ್ಬಂದಿಯೊಂದಿಗೆ ಸಾಗರ ಎಆರ್.ಟಿಓ ಕಚೇರಿಯ ಎಆರ್.ಟಿಓ ಡಿ.ಎಚ್.ವೀರೇಶ್, ಐ.ಎಂ.ವಿ ಇನ್‌ಪೆಕ್ಟರ್ ವಾಸುದೇವ್, ಕಚೇರಿ ಅಧೀಕ್ಷಕರು, ಸಿಬ್ಬಂದಿ, ಡಿಜಿಟಲ್ ಕಾರ್ಡ್ ಪ್ರಿಂಟಿಂಗ್ ಸಿಬ್ಬಂದಿಯವರು ಹಾಜರಿದ್ದರು.

error: Content is protected !!