VISL | ವಿಐಎಸ್ಎಲ್ ಪುನರುಜ್ಜೀವನ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

VISL

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
(VISL) SHIVAMOGGA: ನವದೆಹಲಿಯಲ್ಲಿ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ (HD Devegowda) ಸಮ್ಮುಖದಲ್ಲಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್. ಡಿ ಕುಮಾರಸ್ವಾಮಿ (HD Kumarswamy) ಅವರನ್ನು ಭೇಟಿಯಾಗಿ ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ(VISL)ಯನ್ನು ಆದಷ್ಟು ಬೇಗನೆ ಬಂಡವಾಳ ಹೂಡಿಕೆ ಪಟ್ಟಿಯಿಂದ ಕೈಬಿಟ್ಟು ಕಾರ್ಖಾನೆಯ ಪುನರುಜ್ಜೀವನಗೊಳಿಸುವ ಸಲುವಾಗಿ ಅಗತ್ಯ ಬಂಡವಾಳವನ್ನು ಹೂಡುವಂತೆ ಭಾರತೀಯ ಉಕ್ಕು ಪ್ರಾಧಿಕಾರ (SAIL)ಗೆ ನಿರ್ದೇಶನ ನೀಡುವಂತೆ ಕೋರಲಾಯಿತು.
ಈ ಕಾರ್ಖಾನೆಯ ಪುನರುಜ್ಜೀವನಗೊಳಿಸುವ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಹಿಂದೆ ಲೋಕಸಭಾ ಸದಸ್ಯರಾದಾಗಿನಿಂದಲೂ ರಾಜ್ಯ ಮತ್ತು ಕೇಂದ್ರ ಸರ್ಕಾರದೊಂದಿಗೆ ನಡೆಸಲಾದ ಹಲವು ಪ್ರಯತ್ನಗಳ ಬಗ್ಗೆ ವಿವರವಾಗಿ ತಿಳಿಸಲಾಯಿತು.

VISL

ಕರ್ನಾಟಕ ಕೈಗಾರಿಕಾ ಅಭಿವೃದ್ಧಿಗೆ ಪೂರಕ
ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯನ್ನು ಪುನರ್ಜೀವನಗೊಳಿಸುವುದರಿಂದ ಕೇವಲ ಕರ್ನಾಟಕದಲ್ಲಿ ಕೈಗಾರಿಕಾ ಅಭಿವೃದ್ಧಿ ಅಷ್ಟೇ ಅಲ್ಲದೆ ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುವುದರೊಂದಿಗೆ ಭದ್ರಾವತಿ ತಾಲೂಕಿನ ಸಹಸ್ರಾರು ಕಾರ್ಮಿಕ ಕುಟುಂಬಗಳಿಗೆ ಆರ್ಥಿಕ ಭದ್ರತೆಯನ್ನು ನೀಡುತ್ತದೆ ಎಂಬ ಅಂಶವನ್ನು ಮನವರಿಕೆ ಮಾಡಿ ಕೊಡಲಾಯಿತು.
ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ, ಭದ್ರಾವತಿ ವಿಐಎಸ್ಎಲ್ ನೌಕರರ ಸಂಘದ ಪದಾಧಿಕಾರಿಗಳಾದ ಜೆ.ಜಗದೀಶ್, ಕೆ.ವಿ.ಮಲ್ಲಿಕಾರ್ಜುನ್, ಅಮೃತ್ ಕುಮಾರ್, ಕೆ.ಆರ್.ಮನು, ಎಸ್.ಮೋಹನ್, ಗುತ್ತಿಗೆ ಕಾರ್ಮಿಕ ನೌಕರರ ಪರವಾಗಿ ಎಸ್.ವಿನೋದ್ ಕುಮಾರ್, ಜೆ.ಕಿರಣ್, ಆನಂದ್ ಉಪಸ್ಥಿತರಿದ್ದರು.
ಬೇಡಿಕೆಗೆ ಆದಷ್ಟು ತ್ವರಿತವಾಗಿ ಅಗತ್ಯ ಅನುದಾನದೊಂದಿಗೆ ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸುವುದಾಗಿ ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ. 

READ | ತ್ಯಾವರೆಕೊಪ್ಪ ಹುಲಿ, ಸಿಂಹ ಧಾಮದ ಹಿರಿಯಣ್ಣ ಆರ್ಯ ಸಾವು

error: Content is protected !!