ಸುದ್ದಿ ಕಣಜ.ಕಾಂ | TALUK | WILD LIFE
ಶಿವಮೊಗ್ಗ: ಭಾನುವಾರ ಬೆಳಗಿನ ಜಾವದ ಘಟನೆ ಮಾಸುವ ಮುನ್ನವೇ ಸೋಮವಾರ ಬೆಳಗ್ಗೆಯೂ ಕಾಡಾನೆಯೊಂದು ಉಂಬ್ಳೆಬೈಲು ಗ್ರಾಮದ ತೋಟ, ಗದ್ದೆಗಳಿಗೆ ನುಗ್ಗಿ ಭಾರಿ ದಾಂಧಲೆ ಮಾಡಿದೆ.
ಭದ್ರಾ ಅಭಯಾರಣ್ಯದಿಂದ ಗ್ರಾಮಕ್ಕೆ ನುಗ್ಗಿರುವ ಆನೆಯು ಭತ್ತದ ಗದ್ದೆ ಮತ್ತು ತೋಟಗಳಿಗೆ ನುಗ್ಗಿದೆ. ಇದರಿಂದ, ಭತ್ತದ ಪೈರು, ಅಡಿಕೆ, ತೆಂಗಿನ ಮರಗಳಿಗೆ ಹಾನಿಯಾಗಿದೆ.
ಗ್ರಾಮಸ್ಥರು ಹೇಳುವಂತೆ, ಸುಮಾರು 10-15 ಎಕರೆ ಪ್ರದೇಶದಲ್ಲಿ ಕಾಡಾನೆಯು ನುಗ್ಗಿದ್ದು, ಸಾಕಷ್ಟು ಪ್ರಮಾಣದ ನಷ್ಟವಾಗಿದೆ. ತೆಂಗು, ಅಡಿಕೆ ಮರಗಳನ್ನು ಮುರಿದಿದೆ.
ಘಟನೆಯ ಬಗ್ಗೆ ಮಾಹಿತಿ ಲಭಿಸಿದ್ದೇ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸೂಕ್ತ ಪರಿಹಾರಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ತಿಳಿಸಿದ್ದಾರೆ.