ಸುದ್ದಿ ಕಣಜ.ಕಾಂ | KARNATAKA | COVID 19
ಶಿವಮೊಗ್ಗ: ಕೊರೊನಾ ವೈರಸ್ ಸೋಂಕಿಗೆ ಬಲಿಯಾದ ಬಿಪಿಎಲ್ ಕುಟುಂಬಕ್ಕೆ ಸರ್ಕಾರದಿಂದ ಇದುವರೆಗೆ ಪರಿಹಾರ ನೀಡಿಲ್ಲ. ಈ ತಿಂಗಳೊಳಗೆ ಪರಿಹಾರ ನೀಡದಿದ್ದರೆ ಟ್ರಸ್ಟ್ ನಿಂದ ಹೈಕೋರ್ಟ್ ಮೋರೆ ಹೋಗಲಾಗುವುದು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ನ ಟ್ರಸ್ಟಿ ಕಲ್ಲೂರು ಮೇಘರಾಜ್ ಆರೋಪಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬಿಪಿಎಲ್ ಕುಟುಂಬದವರಿಗೆ ಪರಿಹಾರ ನೀಡುವ ಭರವಸೆ ನೀಡಿದ್ದರು. ಆದರೆ, ಇಲ್ಲಿಯವರೆಗೆ ಲಭಿಸಿಲ್ಲ. ಇದರಿಂದ, ಬಡ ಕುಟುಂಬಗಳ ಸದಸ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು.
ಮೃತರ ಕುಟುಂಬಕ್ಕೆ ಜಿಲ್ಲಾ ವಿಪತ್ತು ಪರಿಹಾರ ನಿಧಿಯ ಪಿ.ಡಿ ಖಾತೆಯಿಂದ ಪರಿಹಾರ ನೀಡಬಹುದೆಂದು ಸರ್ಕಾರ ತಿಳಿಸಿತ್ತು. ಆದರೆ, ಕಂದಾಯ ಅಧಿಕಾರಿಗಳು ಈ ಆದೇಶವನ್ನೇ ಹಿಂಪಡೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರದ ಹಣವೂ ಬಂದಿಲ್ಲ
ಕೇಂದ್ರ ಸರ್ಕಾರ ಕೂಡ ಮೃತರ ಕುಟುಂಬಗಳಿಗೆ 50,000 ರೂ. ಪರಿಹಾರ ರೂಪದಲ್ಲಿ ನೀಡುವ ಭರವಸೆ ನೀಡಿತ್ತು. ಅದೂ ಕೈಸೇರಿಲ್ಲ ಎಂದು ತಿಳಿಸಿದರು. ಹೊಳೆಮಡಿಲು ವೆಂಕಟೇಶ್, ಎಚ್.ಎಂ ಸಂಗಯ್ಯ, ಶಂಕರಾ ನಾಯ್ಕ್ ಉಪಸ್ಥಿತರಿದ್ದರು.
https://www.suddikanaja.com/2021/10/27/fee-re-fund-stopped-by-government-of-karnataka/