ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಗಂಧರ್ವ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೊಡ್ಡಪೇಟೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಟಿಪ್ಪುನಗರ ನಿವಾಸಿಗಳಾದ ಸಿಕಂದರ್(23), ಸೈಯದ್ ಆಸಿಫ್ ಅಲಿಯಾಸ್ ತಂಡ ಪಾನೀ (30) ಎಂಬುವವರನ್ನು ಬಂಧಿಸಿದ್ದು, ಅಂದಾಜು ₹64,000 ಮೌಲ್ಯದ ಒಟ್ಟು 1 ಕೆಜಿ 150 ಗ್ರಾಂ ಮಾದಕ ವಸ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ
ದೊಡ್ಡಪೇಟೆ ಪೊಲೀಸ್ ಠಾಣೆ ಪಿಐ ಹರೀಶ್ ಪಟೇಲ್ ನೇತೃತ್ವದಲ್ಲಿ ಸಿಬ್ಬಂದಿಯ ತಂಡ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದೆ. ಗಂಧರ್ವ ನಗರದಲ್ಲಿ ಇಬ್ಬರು ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಎನ್.ಡಿ.ಪಿ.ಎಸ್. ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮಾಡಲಾಗುತ್ತಿದೆ.