ಯುವಕನ ಕೊಲೆಗೆ ಯತ್ನ, ಸ್ವಲ್ಪದ್ದರಲ್ಲೇ ಪಾರು

 

 

ಸುದ್ದಿ ಕಣಜ.ಕಾಂ |  TALUK | CRIME NEWS
ಭದ್ರಾವತಿ: ತಾಲೂಕಿನ ಹೊಳೆಹೊನ್ನೂರು ಸಮೀಪದ ಅರಹತೊಳಲು ಗ್ರಾಮದಲ್ಲಿ ಯುವಕನೊಬ್ಬನ ಕೊಲೆಗೆ ಯತ್ನಿಸಿರುವ ಘಟನೆ ಸಂಭವಿಸಿದೆ.

ಅರಹತೊಳಲು ಗ್ರಾಮದ ನಿವಾಸಿ ಸಿ.ವಿ.ರುದ್ರೇಶ್ ಎಂಬಾತನನ್ನು ತೋಟದಲ್ಲಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಲಾಗಿದೆ. ತೀವ್ರ ತೀವ್ರ ರಕ್ತಸ್ರಾವದಿಂದ ಪ್ರಜ್ಞೆ ತಪ್ಪಿದ್ದ ಯುವಕನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೊಲೆಗೆ ಯತ್ನದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!